ಬೆಂಗಳೂರು: ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯದಲ್ಲಿ ಆರಂಭಿಸಿರುವ ಸದಸ್ಯತ್ವ ಅಭಿಯಾನ ಜ. 26 ರವರೆಗೆ ನಡೆಯಲಿದೆ’ ಎಂದು ಪಕ್ಷದ ಕಾರ್ಯಕಾರಿಣಿ ಸದಸ್ಯ ಪೃಥ್ವಿ ರೆಡ್ಡಿ ಹೇಳಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಅವಧಿಯಲ್ಲಿ ಯಾರೇ ಬೇಕಾದರೂ ಆಮ್ ಆದ್ಮಿ ಪಕ್ಷದ ಸದಸ್ಯರಾಗಿ ಹೆಸರು ನೋಂದಾಯಿಸಿಕೊಳ್ಳಬಹುದು. ಇದಕ್ಕಾಗಿ ಯಾವುದೇ ಶುಲ್ಕವನ್ನು ನೀಡಬೇಕಾಗಿಲ್ಲ’ ಎಂದರು.
‘ಅರ್ಜಿಗಳನ್ನು ಸಲ್ಲಿಸಲು ದೂರವಾಣಿ ಸಂಖ್ಯೆ 077982 20033 ಗೆ ‘ಮಿಸ್ ಕಾಲ್’ ನೀಡಿದರೇ ಸಾಕು ಅಥವಾ ಎಸ್ಎಂಎಸ್ ಮೂಲಕ ಹೆಸರು ಮತ್ತು ಅಂಚೆ ಸಂಖ್ಯೆಯ ಮಾಹಿತಿಯನ್ನು ನೀಡಬಹುದು’ ಎಂದು ಹೇಳಿದರು.
‘ಪಕ್ಷದ ಜಾಲತಾಣದಲ್ಲೂ ನೋಂದಣಿಗೆ ಅವಕಾಶವಿದ್ದು, aapkaragent@gmail.comಗೆ ಇಮೇಲ್ ಮುಖಾಂತರ ಸದಸ್ಯತ್ವವನ್ನು ಪಡೆಯಬಹುದಾಗಿದೆ. ಜಿಲ್ಲಾ ಮಟ್ಟದ ಕಾರ್ಯಕರ್ತರ ಬಗ್ಗೆ ಮಾಹಿತಿಯನ್ನು www.aapkarnataka.org ಆನ್ಲೈನ್ನಲ್ಲಿ ಪಡೆಯಬಹುದು
‘ಬೆಂಗಳೂರು, ಮೈಸೂರು, ಮಂಗಳೂರು, ಹುಬ್ಬಳ್ಳಿ, ಧಾರವಾಡ, ಕಾರವಾರ, ಬೆಳಗಾವಿ ಸೇರಿ ರಾಜ್ಯದ 12 ಲೋಕಸಭಾ ಕ್ಷೇತ್ರಗಳಲ್ಲಿ ಎಎಪಿ ಸ್ಪರ್ಧಿಸಲಿದೆ. ಮುಂದೆ ಸಂಘಟನೆನೋಡಿಕೊಂಡು ಇನ್ನಿತರ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಚಿಂತನೆ ನಡೆಸಲಾಗುವುದು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.