ADVERTISEMENT

ಬ್ಯಾಂಕ್‌ಗೆ ₹ 3.03 ಕೋಟಿ ವಂಚನೆ; ಎಫ್‌ಐಆರ್‌

​ಪ್ರಜಾವಾಣಿ ವಾರ್ತೆ
Published 1 ಜುಲೈ 2019, 19:56 IST
Last Updated 1 ಜುಲೈ 2019, 19:56 IST

ಬೆಂಗಳೂರು: ‘ಕಾರ್ಪೋರೇಷನ್ ಬ್ಯಾಂಕ್‌ನ ಹಿಂದಿನ ಸಹಾಯಕ ವ್ಯವಸ್ಥಾಪಕ ಪಿ.ಎ. ಉತ್ತಮ್ ಅವರು ₹ 3.03 ಕೋಟಿ ವಂಚನೆ ಮಾಡಿದ್ದಾರೆ’ ಎಂದು ಆರೋಪಿಸಿ ಹಾಲಿಸಹಾಯಕ ವ್ಯವಸ್ಥಾಪಕ ಎಂ.ಆರ್.ಮನೋಹರ್, ಸಂಪಂಗಿರಾಮನಗರ ಠಾಣೆಗೆ ದೂರು ನೀಡಿದ್ದಾರೆ.

‘ಬ್ಯಾಂಕ್‌ನಲ್ಲಿ ರದ್ದಾದ ಡಿ.ಡಿ.ಗಳನ್ನು ಹೊಸ ಡಿ.ಡಿ.ಗಳಾಗಿ ಸೃಷ್ಟಿಸಿದ್ದ ಉತ್ತಮ್, ಅವುಗಳನ್ನು ಬಳಸಿ ಬ್ಯಾಂಕ್‌ನ ಹಣವನ್ನು ತನ್ನ ಹಾಗೂ ಇತರರ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಆ ಮೂಲಕ ಬ್ಯಾಂಕ್‌ಗೆ ವಂಚಿಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ’ ಎಂದು ಮನೋಹರ್ ಒತ್ತಾಯಿಸಿದ್ದಾರೆ.

ಪೊಲೀಸರು, ‘ಉತ್ತಮ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಬ್ಯಾಂಕ್ ವಹಿವಾಟಿನ ದಾಖಲೆಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದೇವೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.