ADVERTISEMENT

ಅಕ್ರಮವಾಗಿ ಸಾಗಿಸುತ್ತಿದ್ದ 30 ಗೋವುಗಳ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2020, 20:23 IST
Last Updated 15 ನವೆಂಬರ್ 2020, 20:23 IST

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 30 ಗೋವುಗಳನ್ನು ರಕ್ಷಣೆ ಮಾಡಲಾಗಿದ್ದು, ಈ ಸಂಬಂಧ ಆರ್‌.ಎಂ.ಸಿ ಯಾರ್ಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದ ಕಂಟೇನರ್ ವಾಹನವನ್ನು ಗೋರಗುಂಟೆಪಾಳ್ಯ ಬಳಿ ತಡೆದು ತಪಾಸಣೆ ನಡೆಸಲಾಯಿತು. ಕಂಟೇನರ್‌ನಲ್ಲಿ ಗೋವುಗಳು ಇರುವುದನ್ನು ಕಂಡು ದಾಖಲೆಗಳನ್ನು ಕೇಳಿದ್ದೆವು. ದಾಖಲೆ ತೋರಿಸುವ ನೆಪದಲ್ಲಿ ವಾಹನದಿಂದ ಇಳಿದಿದ್ದ ಚಾಲಕ, ಸ್ಥಳದಿಂದ ಓಡಿ ಹೋಗಿದ್ದಾನೆ’ ಎಂದು ಪೊಲೀಸರು ತಿಳಿಸಿದರು.

‘ಸ್ವಯಂ ಸೇವಾ ಸಂಘಟನೆಯೊಂದರ ಮಾಹಿತಿಯಂತೆ ಈ ತಪಾಸಣೆ ನಡೆಸಲಾಯಿತು. ವಾಹನದ ಕ್ಲೀನರ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದರು.

ADVERTISEMENT

‘ಗೋವುಗಳ ಕಾಲು ಹಾಗೂ ಬಾಯಿ ಕಟ್ಟಿಹಾಕಿ ನಗರಕ್ಕೆ ಸಾಗಿಸಲಾಗುತ್ತಿತ್ತು. ಆದರೆ, ಅವುಗಳನ್ನು ನಗರದಲ್ಲಿ ಯಾವ ಪ್ರದೇಶಕ್ಕೆ ತೆಗೆದುಕೊಂಡು ಹೋಗಲಾಗುತ್ತಿತ್ತು ಎಂಬುದು ಗೊತ್ತಾಗಿಲ್ಲ’ ಎಂದೂ ಪೊಲೀಸರು
ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.