ADVERTISEMENT

ಕೋವಿಡ್ ಪರಿಹಾರ ನಿಧಿ: ₹ 36 ಲಕ್ಷ ದೇಣಿಗೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2020, 23:10 IST
Last Updated 23 ಸೆಪ್ಟೆಂಬರ್ 2020, 23:10 IST

ಬೆಂಗಳೂರು: ಮುಖ್ಯಮಂತ್ರಿ ಕೋವಿಡ್–19 ಪರಿಹಾರ ನಿಧಿಗೆ ಬೆಂಗಳೂರು ಕ್ಲಬ್‌ ಸದಸ್ಯರು ₹ 36 ಲಕ್ಷ ನೀಡಿದ್ದಾರೆ.

152 ವರ್ಷದ ಹಳೆಯದಾದ ಈ ಕ್ಲಬ್ ಸಾಮಾಜಿಕ ಕಾರ್ಯಗಳಿಗೆ ಸ್ಪಂದಿಸುವ ಜತೆಗೆ ಸರ್ಕಾರದ ಜತೆಗೆ ಕೂಡ ಕೈಜೋಡಿಸುತ್ತಾ ಬಂದಿದೆ. ಕೋವಿಡ್‌ನಿಂದಾಗಿ ರಾಜ್ಯ ಸಂಕಷ್ಟವನ್ನು ಎದುರಿಸುತ್ತಿರುವ ಕಾರಣ ಕ್ಲಬ್‌ನ ಸದಸ್ಯರು ಸ್ವಯಂಪ್ರೇರಿತರಾಗಿ ಹಣವನ್ನು ನೀಡಿದ್ದಾರೆ. ಇತ್ತೀಚೆಗೆ ನಡೆದ ಶಿಕ್ಷಕರ ದಿನಾಚರಣೆಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕ್ಲಬ್‌ನ ಸದಸ್ಯರು ಚೆಕ್‌ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT