ADVERTISEMENT

4ರಿಂದ ಜನಸಂಕಲ್ಪ ಜಾಥಾ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2018, 19:40 IST
Last Updated 2 ಮಾರ್ಚ್ 2018, 19:40 IST

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ರಾಜಕಾರಣಿಗಳ ಪೊಳ್ಳು ಭರವಸೆಗೆ ಬಲಿಯಾಗದಂತೆ ಜಾಗೃತಿ ಮೂಡಿಸಲು ಇದೇ 4ರಿಂದ ಜನ
ಸಂಕಲ್ಪ ಜಾಥಾ ನಡೆಯಲಿದೆ ಎಂದು ಭಾರತೀಯ ರಿಪಬ್ಲಿಕನ್‌ ಪಕ್ಷದ ಉಪಾಧ್ಯಕ್ಷ ಶ್ರೀನಿವಾಸ್‌ ತಿಳಿಸಿದರು.

‘4ರಂದು ಕೋಲಾರದ ಹಳೇ ಬಸ್‌ ನಿಲ್ದಾಣದಲ್ಲಿ ಜಿಲ್ಲಾ ಕಾರ್ಯಕರ್ತರ ಸಮಾವೇಶದಲ್ಲಿ ಭೀಮರಥಕ್ಕೆ ಆರ್‌ಪಿಐ ರಾಷ್ಟ್ರೀಯ ಘಟಕದ ಅಧ್ಯಕ್ಷ ರಾಮದಾಸ ಅಠವಳೆ ಚಾಲನೆ ನೀಡಲಿದ್ದಾರೆ. 5ರಿಂದ ಬೆಂಗಳೂರಿನ 28 ಕ್ಷೇತ್ರಗಳಲ್ಲಿ ಜಾಥಾ ಸಂಚರಿಸಲಿದೆ. ಪ್ರತಿದಿನ ಆಯಾ ಕ್ಷೇತ್ರದಲ್ಲಿ ಬಹಿರಂಗ ಸಭೆ ನಡೆಸಲಾಗುವುದು’ ಎಂದರು.

‘ಏಪ್ರಿಲ್‌ ಮೊದಲ ವಾರದಲ್ಲಿ ರಾಜ್ಯಮಟ್ಟದ ಸಮಾವೇಶ ನಡೆಸುತ್ತೇವೆ. ಅದೇ ದಿನ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿ, ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡುತ್ತೇವೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.