ADVERTISEMENT

41 ಬಾಲ ಕಾರ್ಮಿಕರ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2013, 20:00 IST
Last Updated 18 ಡಿಸೆಂಬರ್ 2013, 20:00 IST

ಬೆಂಗಳೂರು: ವಾಲ್ಮಿಕಿನಗರ, ಆಜಾದ್‌­ನಗರ ಹಾಗೂ ಟಿಪ್ಪುನಗರದ ಶಾಲಾ ಬ್ಯಾಗ್‌ ತಯಾರಿಕಾ ಘಟಕಗಳ ಮೇಲೆ ಬುಧವಾರ ದಾಳಿ ನಡೆಸಿದ ಚಾಮರಾಜ­ಪೇಟೆ ಪೊಲೀಸರು 41 ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ.

ಬ್ಯಾಗ್‌ ತಯಾರಿಕಾ ಘಟಕದಲ್ಲಿ ಮಕ್ಕಳು ದುಡಿಯುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಕೇಳಿ ಬಂದಿದ್ದವು.

ಕಾರ್ಯಾಚರಣೆ ನಡೆಸಿ ಬಿಹಾರ, ಪಶ್ಚಿಮಬಂಗಾಳ ಹಾಗೂ ಒಡಿಶಾ ಮೂಲದ 10 ರಿಂದ 15ರ ವಯೋ­ಮಾನದ 41 ಮಕ್ಕಳನ್ನು ರಕ್ಷಿಸಲಾಗಿದೆ. ಮಕ್ಕಳನ್ನು ಸಮೀಪದ ಬಾಲಮಂದಿರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.