ಬೆಂಗಳೂರು: ಮೇಯರ್ ಆರ್.ಸಂಪತ್ರಾಜ್ ಮತ್ತು ಪಾಲಿಕೆ ಆಡಳಿತ ಪಕ್ಷದ ನಾಯಕ ಮಹಮದ್ ರಿಜ್ವಾನ್ ನವಾಬ್ ವಾಣಿಜ್ಯ ಮತ್ತು ಕೈಗಾರಿಕಾ ವ್ಯಾಪಾರ ಮೇಳದಲ್ಲಿ ಭಾಗವಹಿಸಲು ಬುಧವಾರ ಸಂಜೆ ಚೀನಾಕ್ಕೆ ಪ್ರಯಾಣ ಆರಂಭಿಸಿದರು.
ಸಾನ್ಯ ಸಿಟಿಯಲ್ಲಿ ನಡೆಯಲಿರುವ ಈ ಮೇಳಕ್ಕೆ ದೇಶದ ಎಲ್ಲ ಮಹಾ ನಗರಗಳ ಮೇಯರ್ಗಳಿಗೆ ಭಾಗವಹಿಸಲು ಚೀನಾ ಆಹ್ವಾನ ನೀಡಿದೆ. ಪಾಲಿಕೆ ಅಧಿಕಾರಿಗಳೂ ಈ ಮೇಳದಲ್ಲಿ ಭಾಗವಹಿಸಬೇಕಿತ್ತು. ಆದರೆ, ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಹೊಸ ಮತದಾರರ ನೋಂದಣಿ ನಡೆಯುತ್ತಿರುವುದರಿಂದ ಮೇಯರ್ ಮತ್ತು ಆಡಳಿತ ಪಕ್ಷದ ನಾಯಕ ಮಾತ್ರ ಮೇಳದಲ್ಲಿ ಭಾಗವಹಿಸಲಿದ್ದಾರೆ. ಜ.15ರಂದು ನಗರಕ್ಕೆ ವಾಪಸಾಗಲಿದ್ದಾರೆ ಎಂದು ಪಾಲಿಕೆ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.