ADVERTISEMENT

‘ರಾಜ್ಯದಲ್ಲೂ ಮರಳು ಗಣಿಗಾರಿಕೆ ಸಂಪೂರ್ಣ ನಿಷೇಧ’

​ಪ್ರಜಾವಾಣಿ ವಾರ್ತೆ
Published 11 ಜನವರಿ 2018, 19:47 IST
Last Updated 11 ಜನವರಿ 2018, 19:47 IST

ಬೆಂಗಳೂರು: ರಾಜ್ಯದಲ್ಲೂ ಮರಳು ಗಣಿಗಾರಿಕೆ ಸಂಪೂರ್ಣ ನಿಷೇಧಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಸಚಿವ ಟಿ.ಬಿ. ಜಯಚಂದ್ರ ತಿಳಿಸಿದರು.

ಈ ಕುರಿತು ಸಂಬಂಧಿಸಿದವರಿಗೆ ಆದೇಶ ನೀಡಲಾಗುವುದು ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಗುರುವಾರ ಅವರು ತಿಳಿಸಿದರು.

‘ಮರಳು ಗಣಿಗಾರಿಕೆ ನಿಷೇಧಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿದ ಬಳಿಕ ತಮಿಳುನಾಡು, ಕೇರಳದಲ್ಲಿ ನದಿ ಪಾತ್ರದಿಂದ ಮರಳು ತೆಗೆಯಲು ಅವಕಾಶ ಇಲ್ಲ’ ಎಂದರು.

ADVERTISEMENT

ಮರಳು ಗಣಿಗಾರಿಕೆಯಿಂದ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ ಎಂಬ ಕಾರಣಕ್ಕೆ ರಾಜ್ಯದಲ್ಲೂ ಎಂ. ಸ್ಯಾಂಡ್ (ಕೃತಕ ಮರಳು) ಉತ್ಪಾದನೆ ಹೆಚ್ಚಿಸಲಾಗುತ್ತದೆ. ವಿದೇಶಗಳಿಂದ ಮರಳು ಆಮದು ಮಾಡಿಕೊಳ್ಳಲು ನಿರ್ಧರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.