ADVERTISEMENT

ಶ್ರೀಗಂಧ ಕದ್ದವರಿಗೆ 5 ವರ್ಷ ಜೈಲು ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 12 ಜನವರಿ 2018, 19:30 IST
Last Updated 12 ಜನವರಿ 2018, 19:30 IST

ಬೆಂಗಳೂರು: ಶ್ರೀಗಂಧ ಮರಗಳನ್ನು ಕದ್ದು ಅಕ್ರಮವಾಗಿ ಸಾಗಣೆ ಮಾಡುವಾಗ ಸಿಕ್ಕಿಬಿದ್ದಿದ್ದ ಇಬ್ಬರಿಗೆ 60ನೇ ಸಿಟಿ ಸಿವಿಲ್‌ ನ್ಯಾಯಾಲಯವು ಐದು ವರ್ಷ ಜೈಲು ಶಿಕ್ಷೆ ಹಾಗೂ ₹50,000 ದಂಡ ವಿಧಿಸಿದೆ.

ಹಾಸನ ಜಿಲ್ಲೆಯ ಮಾಡಹಾಳು ಗ್ರಾಮದ ಗೌಸ್‌ಪೀರ್ (44) ಹಾಗೂ ತುಮಕೂರಿನ ಕೆಂಪನಹಳ್ಳಿಯ ರಂಗನಾಥ್ (33) ಶಿಕ್ಷೆಗೆ ಒಳಗಾದವರು.

ವಿದ್ಯಾರ್ಥಿನಿ ಆತ್ಮಹತ್ಯೆ: ‘ಅಡುಗೆ ಮಾಡುವುದನ್ನು ಕಲಿತಿಲ್ಲ’ ಎಂದು ತಾಯಿ ಬೈದಿದ್ದಕ್ಕೆ ಪಿಯುಸಿ ವಿದ್ಯಾರ್ಥಿನಿ ವರಲಕ್ಷ್ಮಿ (17) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ADVERTISEMENT

ಯಲಹಂಕ ಉಪನಗರ ಸಮೀಪದ ಕನಕನಗರ ನಿವಾಸಿಯಾದ ವರಲಕ್ಷ್ಮಿ, ಶುಕ್ರವಾರ ಮಧ್ಯಾಹ್ನ ಮನೆಯಲ್ಲೇ ನೇಣು ಹಾಕಿಕೊಂಡಿದ್ದಾಳೆ. ಕೂಲಿ ಕೆಲಸಕ್ಕೆ ಹೋಗಿದ್ದ ತಾಯಿ ಗಂಗಮ್ಮ, ಸಂಜೆ 4.30ರ ಸುಮಾರಿಗೆ ಮನೆಗೆ ಮರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.