ADVERTISEMENT

ಮಗು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ

​ಪ್ರಜಾವಾಣಿ ವಾರ್ತೆ
Published 12 ಜನವರಿ 2018, 19:37 IST
Last Updated 12 ಜನವರಿ 2018, 19:37 IST

ಬೆಂಗಳೂರು: ಸುಬ್ರಹ್ಮಣ್ಯಪುರದ ಪೂರ್ವಪ್ರಜ್ಞಾ ಲೇಔಟ್‌ನಲ್ಲಿ ಮಗುವನ್ನು ಕೊಂದ ತಾಯಿ ಬಳಿಕ ನೇಣು ಹಾಕಿಕೊಂಡು ಶುಕ್ರವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಒಂದೂವರೆ ವರ್ಷದ ಅಗಸ್ತ್ಯ ಹಾಗೂ ಬಿ.ವಿ.ಪೃತಾ(28) ಮೃತರು. ಕನಕಪುರದ ಸಾತನೂರಿನವರಾದ ಪೃತಾ ಎರಡೂವರೆ ವರ್ಷಗಳ ಹಿಂದೆ ಸಾಫ್ಟ್‌ವೇರ್ ಎಂಜಿನಿಯರ್ ಅನಿಲ್ ಎಂಬುವರನ್ನು ಮದುವೆಯಾಗಿದ್ದರು.

ಶುಕ್ರವಾರ ಸಂಜೆ ಮಗುವಿನ ಕತ್ತು ಹಿಸುಕಿ ಕೊಲೆ ಮಾಡಿದ ಅವರು ಬಳಿಕ ನೇಣಿಗೆ ಶರಣಾಗಿದ್ದಾರೆ. ಪತಿಯ ಸಂಬಂಧಿಕರು ಮನೆಗೆ ಬಂದಾಗ ವಿಷಯ ಗೊತ್ತಾಗಿದೆ. ಘಟನೆಯ ಕಾರಣ ತಿಳಿದು ಬಂದಿಲ್ಲ. ದೂರು ಕೊಡಲು ಬಂದಿದ್ದ ಅವರ ತಾಯಿ ಎದೆನೋವು ಕಾರಣ ನೀಡಿ ವಾಪಾಸ್ ಹೋಗಿದ್ದಾರೆ ಎಂದು ಸುಬ್ರಹ್ಮಣ್ಯಪುರ ಪೊಲೀಸರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.