ಬೆಂಗಳೂರು: ಉದ್ಯೋಗಕ್ಕಾಗಿ ಯುವಜನರು ವೇದಿಕೆಯ ‘ಉದ್ಯೋಗಕ್ಕೆ ಮತ’ ಅಭಿಯಾನಕ್ಕೆ ಜನಾಂದೋಲನಗಳ ಮಹಾಮೈತ್ರಿ ಸಂಘಟನೆ ಬೆಂಬಲ ಸೂಚಿಸಿದೆ.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಸಂಚಾಲಕ ಎಸ್.ಆರ್.ಹಿರೇಮಠ್, ‘ನಿರುದ್ಯೋಗ ದೇಶದ ದೊಡ್ಡ ಸಮಸ್ಯೆ. ಅಧಿಕಾರದಲ್ಲಿರುವ ಬಿಜೆಪಿ ಹಾಗೂ ಕಾಂಗ್ರೆಸ್ ಈ ಸಮಸ್ಯೆ ಬಗೆಹರಿಸುವ ಬದಲು ಸ್ವಾರ್ಥ ಹಾಗೂ ಧರ್ಮ ರಾಜಕಾರಣ ಮಾಡುತ್ತಿವೆ. ಹೀಗಾಗಿ, ಉದ್ಯೋಗ ಕಲ್ಪಿಸುವ ಸ್ಪಷ್ಟ ಭರವಸೆ ನೀಡುವ ಪಕ್ಷಕ್ಕೆ ಮತ ಹಾಕುವಂತೆ ಯುವಕರಲ್ಲಿ ಅರಿವು ಮೂಡಿಸುತ್ತೇವೆ’ ಎಂದು ಹೇಳಿದರು.
ಅಧಿಕಾರಕ್ಕೆ ಬಂದರೆ ಪ್ರತಿ ವರ್ಷಕ್ಕೆ 1 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ 2014ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಭರವಸೆ ನೀಡಿತ್ತು. ಅದು ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಸೃಷ್ಟಿಯಾಗಿರುವುದು ಕೇವಲ 4 ಲಕ್ಷ ಉದ್ಯೋಗ. ಮಾತಿಗೆ ತಪ್ಪಿದ ಬಿಜೆಪಿಯನ್ನು ತಿರಸ್ಕರಿಸಬೇಕು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.