ADVERTISEMENT

ಬೆತ್ತನಗೆರೆ ಶಂಕರ ಸೆರೆ

​ಪ್ರಜಾವಾಣಿ ವಾರ್ತೆ
Published 15 ಜನವರಿ 2018, 19:58 IST
Last Updated 15 ಜನವರಿ 2018, 19:58 IST

ಬೆಂಗಳೂರು: ದರೋಡೆ ಮಾಡಲು ಸಂಚು ರೂಪಿಸಿದ್ದ ಆರೋಪದಡಿ ಬೆತ್ತನಗೆರೆ ಶಂಕರೇಗೌಡ ಅಲಿಯಾಸ್ ಶಂಕರ (36) ಹಾಗೂ ಆತನ ನಾಲ್ವರು ಸಹಚರರನ್ನು ಸಿಸಿಬಿ ಪೊಲೀಸರು ಭಾನುವಾರ ಮಧ್ಯಾಹ್ನ ಬಂಧಿಸಿದ್ದಾರೆ.

ಬೆತ್ತನಗೆರೆ ಮಂಜುನಾಥ (30), ದೊಡ್ಡಬಿದರಕಲ್ಲಿನ ನಾರಾಯಣಸ್ವಾಮಿ (31), ನೆಲಮಂಗಲದ ಶ್ರೀಧರ್ ಹಾಗೂ ಶ್ರೀಕಾಂತ್ (32) ಬಂಧಿತರು.

ರಾಜಗೋಪಾಲನಗರ ಠಾಣಾ ವ್ಯಾಪ್ತಿಯ ಶ್ರೀಗಂಧನಗರ ಕಡೆಯಿಂದ ಪಿಳ್ಳಪ್ಪನಕಟ್ಟೆಗೆ ಹೋಗುವ ಸಾರ್ವಜನಿಕರನ್ನು ಅಡ್ಡಗಟ್ಟಿ ದರೋಡೆ ಮಾಡಲು ಆರೋಪಿಗಳು ಹೊಂಚು ಹಾಕಿದ್ದರು. ಈ ಬಗ್ಗೆ ಬಾತ್ಮೀದಾರರಿಂದ ಸಿಕ್ಕ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಅವರನ್ನು ವಶಕ್ಕೆ ಪಡೆದಿದೆವು ಎಂದು ಪೊಲೀಸರು ತಿಳಿಸಿದರು.

ADVERTISEMENT

ಕಾರು ಹಾಗೂ ಮಾರಕಾಸ್ತ್ರಗಳನ್ನು ಜಪ್ತಿ ಮಾಡಿದ್ದೇವೆ. ಆರೋಪಿಗಳು ಈ ಹಿಂದೆ ನಡೆಸಿದ ಕೃತ್ಯದ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದೇವೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.