ಚಿಕ್ಕಬಳ್ಳಾಪುರ: ಕಳೆದ ಒಂದು ವರ್ಷದಿಂದ ಜಿಲ್ಲಾ ಪಂಚಾಯಿತಿಯಲ್ಲಿ ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ ಅವರ ‘ಪದತ್ಯಾಗ’ಕ್ಕೆ ಒತ್ತಾಯಿಸಿ ‘ಸ್ವಪ
ಕ್ಷೀಯ’ರಲ್ಲೇ ಕಾಣಿಸಿಕೊಂಡ ಬಂಡಾಯದ ಬಿಸಿ ಕೊನೆಗೂ ತಣ್ಣಗಾಗಲಿಲ್ಲ. ಇದೀಗ ಹೈಕಮಾಂಡ್ ಒತ್ತಡಕ್ಕೆ ಮಣಿದ ಕೇಶವರೆಡ್ಡಿ ಅವರು ಗುರುವಾರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.
ಕೇಶವರೆಡ್ಡಿ ಅವರು, ‘ಗುರುವಾರ (ಜ.18) ಬೆಂಗಳೂರಿನಲ್ಲಿ ಗ್ರಾಮೀಣ ಮತ್ತು ಪಂಚಾಯತ್ ರಾಜ್ ಇಲಾಖೆಯ (ಆರ್ಡಿಪಿಆರ್) ಪ್ರಧಾನ ಕಾರ್ಯದರ್ಶಿ ಅವರಿಗೆ ರಾಜೀನಾಮೆ ಸಲ್ಲಿಸುತ್ತೇನೆ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.