ADVERTISEMENT

ಮೊಬೈಲ್ ಕೊಡದಿದ್ದಕ್ಕೆ ಹಲ್ಲೆ

​ಪ್ರಜಾವಾಣಿ ವಾರ್ತೆ
Published 22 ಜನವರಿ 2018, 19:41 IST
Last Updated 22 ಜನವರಿ 2018, 19:41 IST

ಬೆಂಗಳೂರು: ರಾಜಾಜಿನಗರದ ರಾಜ್‌ಕುಮಾರ್ ರಸ್ತೆಯಲ್ಲಿ ಮುಜಾಮುರ್ ಲಷ್ಕರ್ (20) ಎಂಬುವರ ಮೇಲೆ ಮೂವರು ದುಷ್ಕರ್ಮಿಗಳು ಭಾನುವಾರ ರಾತ್ರಿ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ.

ಅಭಿಮಾನಿ ವಸತಿಗೃಹದಲ್ಲಿ ಸ್ವಚ್ಛತಾ ಕೆಲಸಗಾರರಾಗಿದ್ದ ಅವರು, ಪಕ್ಕದ ಬಾಡಿಗೆ ಕೊಠಡಿಯಲ್ಲಿ ವಾಸವಾಗಿದ್ದಾರೆ.

ಕಾರ್ಯನಿಮಿತ್ತ ಹೊರಗೆ ಹೋಗಿದ್ದ ಅವರು ರಾತ್ರಿ 11.15ರ ಸುಮಾರಿಗೆ ಕೊಠಡಿಗೆ ಹಿಂದಿರುಗುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಮೂವರು, ಅವರನ್ನು ಅಡ್ಡಗಟ್ಟಿ ಮೊಬೈಲ್ ಹಾಗೂ ಹಣ ನೀಡುವಂತೆ ಒತ್ತಾಯಿಸಿದ್ದರು ಎಂದು ರಾಜಾಜಿನಗರ ಪೊಲೀಸರು ತಿಳಿಸಿದರು.

ADVERTISEMENT

ಅದಕ್ಕೆ ಮುಜಾಮುರ್ ನಿರಾಕರಿಸಿ ಜಗಳವಾಡಿದ್ದರು. ಇದರಿಂದ ಕೋಪಗೊಂಡ ದುಷ್ಕರ್ಮಿಗಳು ಮಚ್ಚಿನಿಂದ ಎಡಗೈಗೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.