ADVERTISEMENT

ಇನ್‌ಸ್ಪೆಕ್ಟರ್‌ಗೆ ಬೆದರಿಕೆ; ಮೂವರಿಗೆ ನೋಟಿಸ್‌ ಜಾರಿ

​ಪ್ರಜಾವಾಣಿ ವಾರ್ತೆ
Published 22 ಜನವರಿ 2018, 19:46 IST
Last Updated 22 ಜನವರಿ 2018, 19:46 IST

ಬೆಂಗಳೂರು: ಸಂಚಾರ ದಟ್ಟಣೆ ನಿಯಂತ್ರಿಸಲು ನಿಯೋಜನೆಗೊಂಡಿದ್ದ ಬಸವನಗುಡಿ ಸಂಚಾರ ಠಾಣೆಯ ಇನ್‌ಸ್ಪೆಕ್ಟರ್ ಅವರನ್ನು ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಮೂವರು ಆರೋಪಿಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ.

ವಾಹನ ತೆರವು ಮಾಡಲು ಸ್ಥಳೀಯ ನಿವಾಸಿಗಳಾದ ಮಂಜು, ಉಮೇಶ್‌ ಹಾಗೂ ಇನ್ನೊಬ್ಬರು ನಿರಾಕರಿಸಿದ್ದರು. ಇನ್‌ಸ್ಪೆಕ್ಟರ್‌ ಅವರನ್ನು ನಿಂದಿಸಿ, ‘ನಿನಗೆ ಒಂದು ಗತಿ ಕಾಣಿಸುತ್ತೇವೆ’ ಎಂದು ಬೆದರಿಕೆ ಸಹ ಹಾಕಿದ್ದರು. ಇನ್‌ಸ್ಪೆಕ್ಟರ್‌ ಬನಶಂಕರಿ ಠಾಣೆಗೆ ದೂರು ನೀಡಿದ್ದರು.

‘ಅವರು ಠಾಣೆಗೆ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ’ ಎಂದು ಪೊಲೀಸರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.