ADVERTISEMENT

ಕಟ್ಟಡದಿಂದ ಬಿದ್ದು ಸಾವು

​ಪ್ರಜಾವಾಣಿ ವಾರ್ತೆ
Published 26 ಜನವರಿ 2018, 20:26 IST
Last Updated 26 ಜನವರಿ 2018, 20:26 IST

ಬೆಂಗಳೂರು: ಕೆ.ಪಿ. ಅಗ್ರಹಾರದ ರಾಮದಾಸ್ ಲೇಔಟ್‌ನಲ್ಲಿ ಕಟ್ಟಡದ ಮೇಲಿನಿಂದ ಬಿದ್ದು ಯುವಕನೊಬ್ಬ ಶುಕ್ರವಾರ ಮೃತಪಟ್ಟಿದ್ದಾನೆ.

‘ಮೃತ ಯುವಕ, ವಸ್ತುಗಳ ಖರೀದಿಗೆಂದು ಅಂಗಡಿಗೆ ಹೋಗಿದ್ದ. ಈ ವೇಳೆ ಆಯತಪ್ಪಿ ನಿರ್ಮಾಣ ಹಂತದ ಕಾಲುವೆಗೆ ಬಿದ್ದಿದ್ದಾನೆ’ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ ಎಂದು ಕೆ.ಪಿ. ಅಗ್ರಹಾರ ಪೊಲೀಸರು ತಿಳಿಸಿದರು.

ಮೃತನ ಸಂಬಂಧಿಕರ ಬಗ್ಗೆ ಇದುವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ, ಯಾರೂ ದೂರು ಕೊಟ್ಟಿಲ್ಲ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.