ADVERTISEMENT

‘6 ತಿಂಗಳಲ್ಲಿ ಬೆಳ್ಳಂದೂರು ಕೆರೆ ಸ್ವಚ್ಛಗೊಳಿಸಿ’

​ಪ್ರಜಾವಾಣಿ ವಾರ್ತೆ
Published 27 ಜನವರಿ 2018, 19:30 IST
Last Updated 27 ಜನವರಿ 2018, 19:30 IST
ಕಳೆ ತೆಗೆಯುವ ಕಾರ್ಯಾಚರಣೆಯ ನೋಟ
ಕಳೆ ತೆಗೆಯುವ ಕಾರ್ಯಾಚರಣೆಯ ನೋಟ   

ಬೆಂಗಳೂರು: ಬೆಳ್ಳಂದೂರು ಕೆರೆಯಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣ ಸಂಬಂಧ ಬಿಡಿಎ ಮತ್ತು ಜಲಮಂಡಳಿಗೆ ನೋಟಿಸ್‌ ನೀಡಿರುವ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಆರು ತಿಂಗಳಲ್ಲಿ ಕೆರೆ ಸ್ವಚ್ಛಗೊಳಿಸುವಂತೆ ನಿರ್ದೇಶಿಸಿದೆ.

‘ಆರು ತಿಂಗಳಿನಲ್ಲಿ ಜಲಮೂಲದ ಕಳೆಯನ್ನು ಸಂಪೂರ್ಣ ತೆರವು ಮಾಡಿರಬೇಕು. ಅದರ ಸುತ್ತಲೂ ಬೇಲಿ ನಿರ್ಮಿಸಬೇಕು ಹಾಗೂ ಆಮ್ಲಜನಕ ಕೊರತೆಯಾಗದಂತೆ ಏರೇಟರ್‌ ಅಳವಡಿಸಬೇಕು ಎಂದು ಬಿಡಿಎಗೆ ಸೂಚನೆ ನೀಡಿದ್ದೇವೆ’ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಲಕ್ಷ್ಮಣ್‌ ತಿಳಿಸಿದರು.

‘ಕೆರೆಯ ಜಲಾನಯನ ಪ್ರದೇಶದಲ್ಲಿರುವ ಎಲ್ಲಾ ಕೊಳಚೆ ನೀರು ಸಂಸ್ಕರಣಾ ಘಟಕಗಳ (ಎಸ್‌ಟಿಪಿ) ಕಾರ್ಯಚಟುವಟಿಕೆ ಬಗ್ಗೆ ಪರಿಶೀಲನೆ ನಡೆಸಿ ಒಂದು ತಿಂಗಳಲ್ಲಿ ವರದಿ ನೀಡುವಂತೆ ಜಲಮಂಡಳಿ ಅಧಿಕಾರಿಗಳಿಗೆ ಹೇಳಿದ್ದೇವೆ. ನಮ್ಮ ಅಧಿಕಾರಿಗಳೂ ಈ ಸಮೀಕ್ಷೆಯಲ್ಲಿ ಪಾಲ್ಗೊಳ್ಳುತ್ತಾರೆ’ ಎಂದು ಮಾಹಿತಿ ನೀಡಿದರು.

ADVERTISEMENT

‘ಇದೇ 29ಕ್ಕೆ ಹಸಿರು ನ್ಯಾಯಮಂಡಳಿಯಲ್ಲಿ (ಎನ್‌ಜಿಟಿ) ವಿಚಾರಣೆ ಇದೆ. ಈವರೆಗೆ ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸುತ್ತೇವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.