ಬೆಂಗಳೂರು: ಸಮೂಹ ಸಾರಿಗೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಬಿಎಂಟಿಸಿ ‘ಗುಂಪು ರಿಯಾಯಿತಿ ಪ್ರಯಾಣ’ ವ್ಯವಸ್ಥೆ ಕಲ್ಪಿಸಿದೆ.
ವಾಯು ವಜ್ರ ಬಸ್ಗಳಲ್ಲಿ 3 ಅಥವಾ ಅದಕ್ಕಿಂತ ಹೆಚ್ಚು ಮಂದಿ ಒಟ್ಟಾಗಿ ಪ್ರಯಾಣಿಸಿದರೆ ಟಿಕೆಟ್ ದರದ ಮೇಲೆ ಶೇ 15ರಷ್ಟು ರಿಯಾ
ಯಿತಿ ನೀಡಲಾಗುತ್ತದೆ. ಇದು ಶನಿವಾರದಿಂದಲೇ ಪ್ರಾಯೋಗಿಕವಾಗಿ ಜಾರಿಗೆ ಬಂದಿದೆ.
ಪ್ರಥಮ ಹಂತದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಎಲೆಕ್ಟ್ರಾನಿಕ್ ಸಿಟಿಗೆ ಕಾರ್ಯಾಚರಣೆಯಾಗುವ ಮಾರ್ಗ ಸಂಖ್ಯೆ ಕೆಐಎಎಸ್-8 ರಲ್ಲಿ ಪ್ರಯಾಣಿಸುವವರಿಗೆ ಮಾತ್ರ ಇದು ಅನ್ವಯಿಸುತ್ತದೆ. ಮುಂದಿನ ದಿನಗಳಲ್ಲಿ ಎಲ್ಲಾ ವಾಯು ವಜ್ರ ಬಸ್ಗಳಿಗೆ ಈ ಸೌಲಭ್ಯ ವಿಸ್ತರಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.