ಬೆಂಗಳೂರು: ಆಯುರ್ವೇದ ಚಿಕಿತ್ಸಾ ಸೇವೆಯಲ್ಲಿ 25 ವರ್ಷ ಪೂರ್ಣಗೊಳಿಸಿರುವ ಎ ಅಂಡ್ ಜೆ ಹೆಲ್ತ್ ಕೇರ್ ಸಂಸ್ಥೆಯ ರಜತ ಮಹೋತ್ಸವ ಇದೇ 28ರಂದು ಸರ್ಜಾಪುರದಲ್ಲಿರುವ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ನಡೆಯಲಿದೆ.
ಸಂಸ್ಥೆಯ ರೂವಾರಿ ಮತ್ತು ಆಡಳಿತ ನಿರ್ದೇಶಕ ಸಿ.ಆರ್.ಜೋಷಿ, ಆಯುರ್ವೇದ ಸಿದ್ಧಿಪೀಠದ ಮಹರ್ಷಿ ಆನಂದ ಗುರೂಜಿ, ಆರೋಗ್ಯ ಸಚಿವ ಕೆ.ಆರ್.ರಮೇಶ್ ಕುಮಾರ್, ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ, ಶಾಸಕರಾದ ಅರವಿಂದ ಲಿಂಬಾವಳಿ, ಸತೀಶ್ ರೆಡ್ಡಿ, ಪಾಲಿಕೆ ಸದಸ್ಯರಾದ ಆಶಾ ಸುರೇಶ್, ಎ.ಕೃಷ್ಣ ರೆಡ್ಡಿ, ಆಯುರ್ವೇದ ಔಷಧ ತಯಾರಕ ಸಂಘದ ಪ್ರಧಾನ ಕಾರ್ಯದರ್ಶಿ ಡಾ.ಡಿ.ರಘುನಾಥನ್ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.