ಬೆಂಗಳೂರು: ಶ್ರವಣಬೆಳಗೊಳದಲ್ಲಿ ನಡೆಯುವ ಮಹಾಮಸ್ತಕಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಷ್ಟ್ರಪತಿ ರಾಮನಾಥ ಕೋವಿಂದ್ ಮಂಗಳವಾರ ರಾತ್ರಿ ನಗರಕ್ಕೆ ಆಗಮಿಸಿದರು.ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಮಾಡಿಕೊಂಡರು. ರಾಜಭವನದಲ್ಲಿ ವಾಸ್ತವ್ಯ ಹೂಡಿರುವ ಬುಧವಾರ ಬೆಳಿಗ್ಗೆ ಶ್ರವಣಬೆಳಗೊಳಕ್ಕೆ ತೆರಳುವರು.
ರಾಜಭವನದಲ್ಲಿ ಅವರನ್ನು ಜೆಡಿಎಸ್ ಅಧ್ಯಕ್ಷ ಎಚ್.ಡಿ.ದೇವೇಗೌಡ ಭೇಟಿ ಮಾಡಿ ಹೈಕೋರ್ಟ್ನಲ್ಲಿ ಖಾಲಿ ಇರುವ ನ್ಯಾಯಮೂರ್ತಿಗಳ ಹುದ್ದೆ ಭರ್ತಿಗೆ ಸಂಬಂಧಿಸಿದ ವಕೀಲರ ಸಂಘದ ಮನವಿಯನ್ನು ಹಸ್ತಾಂತರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.