ADVERTISEMENT

ದೊಣ್ಣೆಯಿಂದ ಹೊಡೆದು ತಾಯಿ ಹತ್ಯೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2018, 19:30 IST
Last Updated 6 ಫೆಬ್ರುವರಿ 2018, 19:30 IST

ಬೆಂಗಳೂರು: ಬಾಗಲಕುಂಟೆಯಲ್ಲಿ ಮುನಿಯಮ್ಮ (55) ಎಂಬುವರನ್ನು ಕೊಲೆ ಮಾಡಿದ ಆರೋಪದಡಿ, ಅವರ ಮಗ ಸಂತೋಷ್ ಕುಮಾರ್‌ನನ್ನು (23) ಪೊಲೀಸರು ಬಂಧಿಸಿದ್ದಾರೆ.

ಮುನಿಯಮ್ಮ ಅವರ ಪತಿ ತೀರಿಕೊಂಡಿದ್ದರು. ಮದ್ಯ ಹಾಗೂ ಮಾದಕ ವಸ್ತುವಿನ ವ್ಯಸನಿ ಆಗಿದ್ದ ಮಗ, ತಾಯಿ ಜತೆ ಜಗಳ ಮಾಡುತ್ತಿದ್ದ. ಭಾನುವಾರ ರಾತ್ರಿ ಮನೆಗೆ ಬಂದಿದ್ದ ಆತ, ಕುಡಿಯಲು ಹಣ ಕೇಳಿದ್ದ.  ಕೊಡದಿದ್ದಕ್ಕೆ ತಾಯಿ ಮುಖಕ್ಕೆ ಗುದ್ದಿ, ದೊಣ್ಣೆಯಿಂದ ಹೊಡೆದಿದ್ದ. ಆಗ
ಅವರು ಪ್ರಜ್ಞೆ ತಪ್ಪಿದ್ದರು.

ಸೋಮವಾರ ಬೆಳಿಗ್ಗೆ ಎಚ್ಚರವಾಗಿದ್ದ ತಾಯಿಯನ್ನು ಆರೋಪಿ ಆಸ್ಪತ್ರೆಗೆ ಕರೆದೊಯ್ದಿರಲಿಲ್ಲ. ಮನೆಯಿಂದ ಹೊರಗಡೆ ಹೋಗಿದ್ದ ಆತ ವಾಪಸ್‌ ಬಂದಿರಲಿಲ್ಲ. ಹೀಗಾಗಿ ಮನೆಯಲ್ಲೇ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.