ADVERTISEMENT

ಕಾಲೇಜು ಚುನಾವಣೆಯಲ್ಲಿ ಸೋತ ವಿದ್ಯಾರ್ಥಿನಿ ಆತ್ಮಹತ್ಯೆ

ರ‍್ಯಾಂಗಿಂಗ್‌ ಆರೋಪ ಮಾಡಿದ ಪೋಷಕರು

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2018, 16:07 IST
Last Updated 8 ಫೆಬ್ರುವರಿ 2018, 16:07 IST
ಮೇಘನಾ
ಮೇಘನಾ   

ಬೆಂಗಳೂರು: ಕಾಲೇಜು ಚುನಾವಣೆಯಲ್ಲಿ ಸೋತ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ವಿದ್ಯಾರ್ಥಿನಿಯನ್ನು ಮೇಘನಾ ಎಂದು ಗುರುತಿಸಲಾಗಿದೆ. ಕುಮಾರಸ್ವಾಮಿ ಲೇಔಟ್‌ನ ದಯಾನಂದ ಸಾಗರ ಕಾಲೇಜಿನಲ್ಲಿ 2ನೇ ಸೆಮಿಸ್ಟರ್ ಸಿವಿಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಮಂಗಳವಾರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಸಹಪಾಠಿಗಳಿಂದ ರ‍್ಯಾಂಗಿಂಗ್‌ ಕಿರುಕುಳಕ್ಕೆ ಬೇಸತ್ತು ನಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ಬಗ್ಗೆ ಸರಿಯಾಗಿ ಗಮನ ಹರಿಸುತ್ತಿಲ್ಲ’ ಎಂದು ಮೇಘನಾ ಪೋಷಕರು ಆರೋಪಿಸಿದ್ದಾರೆ.

ADVERTISEMENT

ಘಟನೆ ಸಂಬಂಧ ರಾಜರಾಜೇಶ್ವರಿನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.