ಬೆಂಗಳೂರು: ಬಿಬಿಎಂಪಿಯ ಬಿಜೆಪಿ ಕಾರ್ಪೋರೇಟರ್ ರೇಖಾ ಅವರ ಪತಿ ಕದಿರೇಶನ್ ಅವರನ್ನು ಬುಧವಾರ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ನಗರದ ಕಾಟನ್ಪೇಟೆ ವ್ಯಾಪ್ತಿಯ ಅಂಜನಪ್ಪ ಗಾರ್ಡನ್ ಬಳಿ ಈ ಘಟನೆ ನಡದಿದೆ.
ಕದಿರೇಶನ್ ಅವರು ಹಳೆ ರೌಡಿಯಾಗಿದ್ದರು ಎಂದು ಹೇಳಲಾಗಿದ್ದು, ಬೆಕ್ಕಿನ ಕಣ್ಣು ರಾಜೇಂದ್ರನ ಸಹಚರನಾಗಿ ಗುರುತಿಸಿಕೊಂಡಿದ್ದರು.
ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎಂದು ಶಂಕಿಸಲಾಗಿದೆ.
-ಹತ್ಯೆ ನಡೆದ ಸ್ಥಳದಲ್ಲಿ ಪೊಲೀಸರ ಪರಿಶೀಲನೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.