ಬೆಂಗಳೂರು: ಬಿಬಿಎಂಪಿಯ ಬಿಜೆಪಿ ಕಾರ್ಪೋರೇಟರ್ ರೇಖಾ ಅವರ ಪತಿ ಕದಿರೇಶನ್ ಅವರನ್ನು ಬುಧವಾರ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ನಗರದ ಕಾಟನ್ಪೇಟೆ ವ್ಯಾಪ್ತಿಯ ಅಂಜನಪ್ಪ ಗಾರ್ಡನ್ ಬಳಿ ಈ ಘಟನೆ ನಡದಿದೆ.
ಕದಿರೇಶನ್ ಅವರು ಹಳೆ ರೌಡಿಯಾಗಿದ್ದರು ಎಂದು ಹೇಳಲಾಗಿದ್ದು, ಬೆಕ್ಕಿನ ಕಣ್ಣು ರಾಜೇಂದ್ರನ ಸಹಚರನಾಗಿ ಗುರುತಿಸಿಕೊಂಡಿದ್ದರು.
ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎಂದು ಶಂಕಿಸಲಾಗಿದೆ.
-ಹತ್ಯೆ ನಡೆದ ಸ್ಥಳದಲ್ಲಿ ಪೊಲೀಸರ ಪರಿಶೀಲನೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.