ADVERTISEMENT

ಚುನಾವಣೆಯಲ್ಲಿ ಅಕ್ರಮ: ಆರೋಪ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2018, 20:11 IST
Last Updated 7 ಫೆಬ್ರುವರಿ 2018, 20:11 IST

ಬೆಂಗಳೂರು: ‘ಬೆಂಗಳೂರು ವಕೀಲರ ಸಂಘದ ಚುನಾವಣೆಯಲ್ಲಿ ಅಕ್ರಮ ನಡೆದಿದೆ. ಆ ಚುನಾವಣೆಯನ್ನು ರದ್ದುಗೊಳಿಸಿ ಮತ್ತೊಮ್ಮೆ ಚುನಾವಣೆ ನಡೆಸಬೇಕು’ ಎಂದು ವಕೀಲ ಎಂ.ಎಚ್‌. ಚಂದ್ರಶೇಖರ್‌ ಒತ್ತಾಯಿಸಿದರು.

ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಸಹ ಖಜಾಂಚಿ ಸ್ಥಾನಕ್ಕೆ ಸ್ಪರ್ಧಿಸಿದ್ದೆ. ಆದರೆ, ಮತ ಚಲಾಯಿಸಲು ನನಗೆ ಅವಕಾಶವನ್ನೇ ನೀಡಲಿಲ್ಲ. ನಿಯಮಗಳನ್ನು ಮೀರಿ ಜಾತಿ, ಹಣ ಹಾಗೂ ಉಡುಗೊರೆಗಳನ್ನು ನೀಡುವ ಮೂಲಕ ಚುನಾವಣಾ ಪ್ರಚಾರ ನಡೆಸಲಾಯಿತು’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT