ಬೆಂಗಳೂರು: ಬಲಿಜ ಸಮುದಾಯವನ್ನು ಪ್ರವರ್ಗ 2(ಎ)ಗೆ ಸೇರಿಸಬೇಕು ಎಂದು ಒತ್ತಾಯಿಸಿ ಇದೇ 10ರಂದು ಸ್ವಾತಂತ್ರ್ಯ ಉದ್ಯಾನ
ದಲ್ಲಿ ರ್ಯಾಲಿ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಬಲಿಜ ಯುವ ಶಕ್ತಿ ಸಂಘದ ಉಪಾಧ್ಯಕ್ಷ ಧನರಾಜ್ ತಿಳಿಸಿದರು.
ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘1994–95ರಲ್ಲಿ ಯಾವುದೇ ಆಯೋಗದ ಶಿಫಾರಸು ಇಲ್ಲದೆ ಸರ್ಕಾರ ಬಲಿಜ ಸಮುದಾಯವನ್ನು ಪ್ರವರ್ಗ 2(ಎ)ಯಿಂದ ಪ್ರವರ್ಗ 3(ಎ)ಗೆ ಸೇರಿಸಿದೆ. ಅಂದು ಬಲಿಜ ಸಮುದಾಯದವರು ಪ್ರತಿಭಟಿಸಲಿಲ್ಲ. ನಮ್ಮ ಸಮುದಾಯದವರಿಗೆ ಸರಿಯಾದ ವಿದ್ಯಾಭ್ಯಾಸ, ಸರ್ಕಾರಿ ಉದ್ಯೋಗ ಸಿಗದೆ ಸಂಕಷ್ಟದಲ್ಲಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.