ADVERTISEMENT

ಟಿಪ್ಪರ್‌ ಡಿಕ್ಕಿ ಸ್ಥಳದಲ್ಲೇ ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2018, 19:45 IST
Last Updated 10 ಫೆಬ್ರುವರಿ 2018, 19:45 IST
ಅಪಘಾತಗೊಂಡ ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸಿದರು
ಅಪಘಾತಗೊಂಡ ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸಿದರು   

ಕನಕಪುರ: ನಗರದ ವಾಣಿ ಟಾಕೀಸ್‌ ಮುಂಭಾಗ ಶನಿವಾರ ಟಿಪ್ಪರ್‌ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರು ದೊಡ್ಡಮಾವಳ್ಳಿ ನಂಜೇಗೌಡ ಸ್ಟ್ರೀಟ್‌ನ ನಟರಾಜು ಅವರ ಪುತ್ರ ಎನ್‌.ಸಾಗರ್‌ (25) ಮೃತಪಟ್ಟವರು. ಅವರು ಬೆಂಗಳೂರಿನಿಂದ ಹೋಂಡಾ ಆಕ್ಟೀವಾ ಸ್ಕೂಟರ್‌ನಲ್ಲಿ ಕಂಪನಿ ಸಂಬಂಧಿತ ಸಭೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ದ್ವಿಚಕ್ರ ವಾಹನಕ್ಕೆ ಟಿಪ್ಪರ್‌ ಡಿಕ್ಕಿ ಹೊಡೆದಾಗ ಸಾಗರ್‌ ರಸ್ತೆ ಮೇಲೆ ಬಿದ್ದಿದ್ದಾರೆ. ಅವರ ತಲೆ ಮೇಲೆ ಟಿಪ್ಪರ್‌ನ ಚಕ್ರ ಹರಿದಿದೆ. ಹೆಲ್ಮೆಟ್‌ ಹೋಳಾಗಿ ತಲೆಗೆ ತೀವ್ರವಾಗಿ ಪೆಟ್ಟಾಗಿ ಕ್ಷಣಾರ್ಧದಲ್ಲಿ ಮೃತಪಟ್ಟಿದ್ದಾರೆ. ಸ್ಕೂಟರ್‌ನಲ್ಲಿದ್ದ ಡ್ರೈವಿಂಗ್‌ ಲೈಸೆನ್ಸ್‌ ಮತ್ತು ಆರ್‌ಸಿ ಪುಸ್ತಕದ ವಿಳಾಸ ಪತ್ತೆ ಹಚ್ಚಿ ಮೃತರ ಕುಟುಂಬಕ್ಕೆ ಮಾಹಿತಿ ನೀಡಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.