ADVERTISEMENT

ವಾಹನ ಡಿಕ್ಕಿ: ಚಿರತೆ ಸಾವು

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2018, 19:30 IST
Last Updated 18 ಫೆಬ್ರುವರಿ 2018, 19:30 IST

ಮಾಗಡಿ: ತಾಲ್ಲೂಕಿನ‌ ನಾರಾಯಣಿ ಪಾಳ್ಯದ ಬಳಿ ಶನಿವಾರ ರಾತ್ರಿ ವಾಹನ ಡಿಕ್ಕಿ ಹೊಡೆದು ಚಿರತೆ ಮೃತಪಟ್ಟಿದೆ.

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಘಟನೆ ನಡೆಯಿತು. ರಸ್ತೆ ದಾಟುವ ಧಾವಂತದಲ್ಲಿ ಚಿರತೆ ವಾಹನಕ್ಕೆ ಸಿಲುಕಿ‌ ಮೃತಪಟ್ಟಿತು.

ಐದು ವರ್ಷದ ಹೆಣ್ಣು ಚಿರತೆ ಇದಾಗಿದೆ. ಶವಪರೀಕ್ಷೆಯ ಬಳಿಕ ಅರಣ್ಯ ಇಲಾಖೆಯ ಸಿಬ್ಬಂದಿ ಅಂತ್ಯಸಂಸ್ಕಾರ ನಡೆಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.