ADVERTISEMENT

ಇಂದು ನೀರಿನ ಅದಾಲತ್‌

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2018, 19:30 IST
Last Updated 21 ಫೆಬ್ರುವರಿ 2018, 19:30 IST

ಬೆಂಗಳೂರು: ಜಲಮಂಡಳಿ ಈಶಾನ್ಯ-3 ಉಪವಿಭಾಗದ ನೀರಿನ ಅದಾಲತ್‌ ಆರ್‌.ಟಿ ನಗರದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಕಚೇರಿಯಲ್ಲಿ ಗುರುವಾರ ಬೆಳಿಗ್ಗೆ 9.30 ರಿಂದ 11ರವರೆಗೆ ನಡೆಯಲಿದೆ.

ನೀರಿನ ಬಿಲ್ಲಿಂಗ್, ನೀರು ಮತ್ತು ಒಳಚರಂಡಿ ಸಂಪರ್ಕ ನೀಡುವಲ್ಲಿ ವಿಳಂಬ, ಗೃಹೇತರದಿಂದ ಗೃಹಸಂಪರ್ಕಕ್ಕೆ ಪರಿವರ್ತನೆ ಮಂಜೂರಾತಿಯಲ್ಲಿ ವಿಳಂಬ, ನೀರು ಹಾಗೂ ಒಳಚರಂಡಿಗೆ ಸಂಬಂಧಿಸಿದ ಎಲ್ಲ ವಿವಾದಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಾಗುತ್ತದೆ.

ಆರ್.ಟಿ.ನಗರ, ಕಾವಲ್ ಭೈರಸಂದ್ರ, ಸಂಜಯನಗರ, ಬಿಇಎಲ್ ರಸ್ತೆ ವ್ಯಾಪ್ತಿಯಲ್ಲಿ ಬರುವ ಗ್ರಾಹಕರು ಅದಾಲತ್‌ನ ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ದೂರವಾಣಿ ಸಂಖ್ಯೆ: 22945139. ವಾಟ್ಸ್‌ ಆ್ಯಪ್‌ ಸಂಖ್ಯೆ– 8762228888ಗೆ ದೂರುಗಳನ್ನು ಕಳುಹಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.