ADVERTISEMENT

850 ಜನರ ನೇತ್ರ ತಪಾಸಣೆ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2012, 18:30 IST
Last Updated 21 ಅಕ್ಟೋಬರ್ 2012, 18:30 IST

ಪೀಣ್ಯ ದಾಸರಹಳ್ಳಿ:  ನಗರದ ಕೊಟ್ಟಿಗೆಪಾಳ್ಯ, ಲಗ್ಗೆರೆಯಲ್ಲಿ ಯುವ ಕಾಂಗ್ರೆಸ್‌ನ ರಾಜರಾಜೇಶ್ವರಿನಗರ ಕ್ಷೇತ್ರ ಘಟಕ, ಸೋಲಂಕಿ ಕಣ್ಣಿನ ಆಸ್ಪತ್ರೆಗಳ ಆಶ್ರಯದಲ್ಲಿ ಈಚೆಗೆ ನಡೆದ ಉಚಿತ ಕಣ್ಣಿನ ತಪಾಸಣಾ ಶಿಬಿರದಲ್ಲಿ 850 ಜನರು ನೇತ್ರ ತಪಾಸಣೆ ಮಾಡಿಸಿಕೊಂಡರು."

350 ಮಂದಿಗೆ ಕನ್ನಡಕ ವಿತರಿಸಲಾಯಿತು. 84 ಜನರನ್ನು ಶಸ್ತ್ರ ಚಿಕಿತ್ಸೆಗಾಗಿ ಸೋಲಂಕಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಶಿಬಿರದ ಆಯೋಜಕರು ತಿಳಿಸಿದರು.

ಪಾಲಿಕೆ ಸದಸ್ಯ ಗೋವಿಂದರಾಜು, ರಾಜರಾಜೇಶ್ವರಿ ನಗರಸಭೆ ಮಾಜಿ ಅಧ್ಯಕ್ಷ ಹನುಮಂತರಾಯಪ್ಪ, ಮುಖಂಡರಾದ ಮೋಹನ್ ಕುಮಾರ್, ನಟರಾಜ್‌ಗೌಡ, ಕೃಷ್ಣ, ಅಮರ್, ಜ್ಯೋತಿ ಇತರರು ಹಾಜರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.