ADVERTISEMENT

9 ವಕೀಲರು ಪೊಲೀಸರ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2012, 10:20 IST
Last Updated 14 ಮಾರ್ಚ್ 2012, 10:20 IST

ಬೆಂಗಳೂರು (ಪಿಟಿಐ):  ಇಲ್ಲಿನ ಸಿಟಿ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಬುಧವಾರ ಪ್ರತಿಭಟನೆ ಮಾಡಲು ಮುಂದಾದ ವಕೀಲರನ್ನು ತಡೆದ ಪೊಲೀಸರು 9 ಮಂದಿ ವಕೀಲರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದರು.

ಮಾರ್ಚಿ 2 ರಂದು ನಡೆದ ಗಲಭೆ ಹಿನ್ನೆಲೆಯಲ್ಲಿ ಮಾರ್ಚಿ 18 ರವರೆಗೂ ನಿಷೇದಾಜ್ಞೆ ಹೇರಲಾಗಿತ್ತು.

ನಿಷೇಧಾಜ್ಷೆ ಉಲ್ಲಂಘಿಸಿ ಪ್ರತಿಭಟನೆಗೆ ಮುಂದಾದ ವಕೀಲರನ್ನು ತಡೆದ ಪೊಲೀಸರು ಮುಂಜಾಗ್ರತಾ ಕ್ರಮವಾಗಿ 9 ಮಂದಿ ವಕೀಲರನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಡಿಸಿಪಿ ರಮೇಶ್ ಅವರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT