ಕೆ.ಆರ್.ಪುರ: 61 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಮಾಲೀಕನಿಂದ ಕೆ.ಆರ್.ಪುರ ಸಂಚಾರಿ ಪೊಲೀಸರು ₹32,000 ಸಾವಿರ ದಂಡ ವಸೂಲಿ ಮಾಡಿದ್ದಾರೆ.
ಎಎಸ್ಐ ರಾಮ ನಾಯಕ್ ನೇತೃತ್ವದಲ್ಲಿ ದ್ವಿಚಕ್ರ ವಾಹನ ಸಂಖ್ಯೆ KA03JZ3801 ಚಾಲಕನನ್ನು ತಡೆದು ತಪಾಸಣೆ ನಡೆಸಿದಾಗ 61 ಬಾರಿ ಸಂಚಾರ ನಿಯಮವನ್ನು ಉಲ್ಲಂಘಿಸಿರುವುದು ಗೊತ್ತಾಯಿತು. ಈ ದಂಡವನ್ನು ವಾಹನ ಮಾಲೀಕರಿಂದ ವಸೂಲಿ ಮಾಡಿದ್ದಾರೆ. ಈ ವಾಹನವು ಬಿಎಸ್ಎನ್ಎಲ್ ಉದ್ಯೋಗಿಯಾದ ರಾಮಮೂರ್ತಿನಗರ ನಿವಾಸಿ ಸುಬ್ರಹ್ಮಣ್ಯ ಎಂಬುವರಿಗೆ ಸೇರಿದ್ದು.
ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರ ಮನೆಗಳಿಗೆ ಮೂರು ದಿನಗಳಿಂದ ತೆರಳಿ ವಸೂಲಿ ಮಾಡಲಾಗುತ್ತಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.