ಬೆಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಅನುಮಾನದ ಮೇಲೆ ಕಲಾಸಿಪಾಳ್ಯ ಪೊಲೀಸ್ ಠಾಣೆಗೆ ಕರೆತಂದಿದ್ದ ವ್ಯಕ್ತಿಯೊಬ್ಬರ ಬಿಡುಗಡೆಗೆ ₹ 22 ಸಾವಿರ ಲಂಚ ಪಡೆದ ಆರೋಪದ ಮೇಲೆ, ಎಎಸ್ಐ ಶ್ರೀನಿವಾಸ ಹಾಗೂ ಮಧ್ಯವರ್ತಿ ಬಾಬು ಎಂಬುವರನ್ನು ‘ಭ್ರಷ್ಟಾಚಾರ ನಿಗ್ರಹ ದಳ’ ಪೊಲೀಸರು ಬಂಧಿಸಿದ್ದಾರೆ. ವಶದಲ್ಲಿದ್ದ ವ್ಯಕ್ತಿಯ ಬಿಡುಗಡೆಗೆ ₹ 40ಸಾವಿರ ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಹಣ ವಶಪಡಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.