ADVERTISEMENT

ಎಸಿಬಿ ಬಲೆಗೆ ಆರೋಗ್ಯಾಧಿಕಾರಿ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2020, 7:04 IST
Last Updated 13 ಡಿಸೆಂಬರ್ 2020, 7:04 IST

ಬೆಂಗಳೂರು: ನೈಸರ್ಗಿಕ ಆಹಾರ ಉತ್ಪನ್ನ ತಯಾರಿಕೆಗಾಗಿ ಎಣ್ಣಿ ಗಿರಣಿ ಆರಂಭಿಸಲು ಅನುಮತಿ ನೀಡಲು ಲಂಚ ಪಡೆಯುತ್ತಿದ್ದ ಬಿಬಿಎಂಪಿ ಹಿರಿಯ ಆರೋಗ್ಯ ಅಧಿಕಾರಿ ಎಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಟಿ. ದಾಸರಹಳ್ಳಿ ವಲಯದ ಆರೋಗ್ಯ ಅಧಿಕಾರಿ ವಿ.ಆರ್. ಪ್ರವೀಣ್‌ಕುಮಾರ್ ಅವರನ್ನು ಬಂಧಿಸಿರುವ ಎಸಿಬಿ ಅಧಿಕಾರಿಗಳು, ಲಂಚದ ಹಣ ವಶಕ್ಕೆ ಪಡೆದಿದ್ದಾರೆ. ಅನುಮತಿ ನೀಡಲು ₹12 ಸಾವಿರ ಲಂಚ ಕೇಳಿದ್ದ ಇವರು, ಮುಂಗಡವಾಗಿ ₹7 ಸಾವಿರ ಪಡೆಯುವಾಗ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT