ಬೆಂಗಳೂರು: ಹಾಲು ಉತ್ಪಾದಕರ ಸಹಕಾರ ಸಂಘವನ್ನು ನೋಂದಣಿ ಮಾಡಲು ₹40 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು ಕೊನೆಯ ಕಂತಿನ ₹5 ಸಾವಿರ ಪಡೆಯುತ್ತಿದ್ದ ಮಲ್ಲೇಶ್ವರದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ಎಫ್ಡಿಎ ಸುನೀಲ್ ಭ್ರಷ್ಟಾಚಾರ ನಿಗ್ರಹ ದಳದ(ಎಸಿಬಿ) ಬಲೆಗೆ ಬಿದ್ದಿದ್ದಾರೆ.
ಬೆಂಗಳೂರು ಉತ್ತರ ತಾಲ್ಲೂಕಿನ ಮೈಹಿಮಣ್ಣನಪಾಳ್ಯದಲ್ಲಿ ತೆರೆದಿರುವ ಹಾಲು ಉತ್ಪಾದಕರ ಸಂಘವನ್ನು ನೋಂದಣಿ ಮಾಡಿಕೊಡಲು ಸುನೀಲ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮೊದಲಿಗೆ ₹25 ಸಾವಿರ, ನಂತರ ₹10 ಸಾವಿರವನ್ನು ಹಂತ ಹಂತವಾಗಿ ಪಡೆದುಕೊಂಡಿದ್ದು, ಮಂಗಳವಾರ ಬಾಕಿ ₹5 ಸಾವಿರ ಪಡೆಯುತ್ತಿದ್ದಾಗ ದಾಳಿ ನಡೆಸಿ ಬಂಧಿಸಲಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.