ಬೆಂಗಳೂರು: ಬೊಮ್ಮನಹಳ್ಳಿ ಜಂಕ್ಷನ್ನಲ್ಲಿ ಶನಿವಾರ ಬೆಳಿಗ್ಗೆ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ರಾಣಿ (55) ಹಾಗೂ ರಮಾದೇವಿ (30) ಎಂಬುವರು ಮೃತಪಟ್ಟಿದ್ದಾರೆ.
ನಾಲ್ವರು ಸಾಫ್ಟ್ವೇರ್ ಉದ್ಯೋಗಿಗಳು ಶುಕ್ರವಾರ ರಾತ್ರಿ ಪಾಳಿ ಕೆಲಸ ಮುಗಿಸಿಕೊಂಡು ‘ಝೂಮ್’ ಕಾರಿನಲ್ಲಿ ಜಾಲಿರೈಡ್ ಹೋಗಿದ್ದರು. ವೇಗವಾಗಿ ವಾಹನ ಚಾಲನೆ ಮಾಡಿಕೊಂಡು ಬೆಳಿಗ್ಗೆ 7.30ರ ಸುಮಾರಿಗೆ ಅವರು ಬೊಮ್ಮನಹಳ್ಳಿ ಜಂಕ್ಷನ್ಗೆ ಬಂದಾಗ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.
ತಮಿಳುನಾಡಿನ ರಾಣಿ ಹಾಗೂ ರಮಾದೇವಿ, ಕೂಲಿ ಕೆಲಸ ಮಾಡಿಕೊಂಡು ಗಾರೆಬಾವಿಪಾಳ್ಯದಲ್ಲಿ ನೆಲೆಸಿದ್ದರು. ಬೆಳಿಗ್ಗೆ ಕೆಲಸಕ್ಕೆ ಹೋಗುತ್ತಿದ್ದಾಗ ಕಾರು ಗುದ್ದಿದೆ. ಕೆಳಗೆ ಬಿದ್ದಾಗ ಮೈಮೇಲೆ ಚಕ್ರ ಹರಿದಿದ್ದರಿಂದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಚಾಲಕ ರೋಹಿತ್ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಮಡಿವಾಳ ಸಂಚಾರ ಪೊಲೀಸರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.