ಬೆಂಗಳೂರು: ಕೆ.ಆರ್.ಪುರ ಠಾಣೆ ವ್ಯಾಪ್ತಿಯಲ್ಲಿ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸುಂದರ್ ಬಾಬು (30) ಎಂಬುವರು ಮೃತಪಟ್ಟಿದ್ದಾರೆ.
‘ಹೂಡಿ ಕಡೆಯಿಂದ ಅಯ್ಯಪ್ಪನಗರ ಕಡೆಗೆ ಹೋಗುವ ರಸ್ತೆಯಲ್ಲಿ ಶನಿವಾರ ರಾತ್ರಿ 10.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬೈಕ್ ಹಿಂಬದಿ ಸವಾರ ಪ್ರೇಮನಾಥ್ ಗಾಯಗೊಂಡಿದ್ದು, ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಲಾರಿ ಹಾಗೂ ಬೈಕ್ ಒಂದೇ ಬದಿಯಲ್ಲಿ ಹೊರಟಿದ್ದವು. ಇದೇ ಸಂದರ್ಭದಲ್ಲೇ ಲಾರಿಗೆ ಬೈಕ್ ತಾಗಿತ್ತು. ರಸ್ತೆಯಲ್ಲಿ ಬೈಕ್ ಉರುಳಿ ಬಿದ್ದಿತ್ತು. ತೀವ್ರ ಗಾಯಗೊಂಡು ಸವಾರ ಸುಂದರ್ಬಾಬು ಸ್ಥಳದಲ್ಲೇ ಮೃತಪಟ್ಟಿದ್ದಾರೆ.’
‘ಲಾರಿ ಹಾಗೂ ಬೈಕ್ ಜಪ್ತಿ ಮಾಡಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದೂ ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.