ADVERTISEMENT

ಅಪಘಾತ; ತಾಯಿ ಸಾವು, ಮಗನಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 11 ಜನವರಿ 2020, 22:25 IST
Last Updated 11 ಜನವರಿ 2020, 22:25 IST

ಬೆಂಗಳೂರು: ಯಶವಂತಪುರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಗ್ಯಾಸ್ ಟ್ಯಾಂಕರ್ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು, ಬೈಕ್‌ನ ಹಿಂಬದಿ ಕುಳಿತಿದ್ದ ಮುತ್ಯಾಲಮ್ಮ (45) ಎಂಬುವರು ಮೃತಪಟ್ಟಿದ್ದಾರೆ.

‘ಮುತ್ಯಾಲಮ್ಮ ಅವರ ಮಗ ಮುರುಳಿ ಎಂಬುವರೂ ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಗ್ಯಾಸ್ ಟ್ಯಾಂಕರ್ ಚಾಲಕ ಶ್ರೀಧರ್ ಎಂಬಾತನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಮುತ್ಯಾಲಮ್ಮ ಅವರು ಗಾರ್ಮೆಟ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಮುರುಳಿ ಅವರು ಸಲೂನ್ ನಡೆಸುತ್ತಿದ್ದರು. ಇವರಿಬ್ಬರು ರಾತ್ರಿ 7.20ರ ಸುಮಾರಿಗೆ ಬೈಕ್‌ನಲ್ಲಿ ಹೊರಟಿದ್ದಾಗಲೇ ಈ ಅವಘಡ ಸಂಭವಿಸಿದೆ.’

ADVERTISEMENT

‘ಮುತ್ಯಾಲಮ್ಮ ಅವರ ತಲೆ ಹಾಗೂ ಮುಖಕ್ಕೆ ತೀವ್ರ ಪೆಟ್ಟಾಗಿತ್ತು. ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲೇ ಅವರು ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.