ಬೆಂಗಳೂರು: ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಹೆಬ್ಬಾಳ ಮೇಲ್ಸೇತುವೆ ಬಳಿ ಅಪಘಾತ ಸಂಭವಿಸಿದ್ದು, ಬೆನ್ಜ್ ಕಾರು ಚಾಲಕ ಹಾಗೂ ಪ್ರಯಾಣಿಕರು ಗಾಯಗೊಂಡಿದ್ದಾರೆ.
‘ಟ್ರಾವೆಲ್ಸ್ ಏಜೆನ್ಸಿಗೆ ಸೇರಿದ್ದ ಬೆನ್ಜ್ ಕಾರಿನಲ್ಲಿ ವಿಮಾನ ನಿಲ್ದಾಣದಿಂದ ಎಚ್ಎಸ್ಆರ್ ಲೇಔಟ್ಗೆ ಪ್ರಯಾಣಿಕರು ಹೊರಟಿದ್ದರು. ಶುಕ್ರವಾರ ನಸುಕಿನ 4.30 ಗಂಟೆ ಸುಮಾರಿಗೆ ಬೆನ್ಜ್ ಕಾರು, ಎದುರಿಗೆ ಹೊರಟಿದ್ದ ಲಾರಿಗೆ ಡಿಕ್ಕಿ ಹೊಡೆದಿತ್ತು. ಇದರಿಂದಾಗಿ ಕಾರು ಜಖಂಗೊಂಡಿತ್ತು’ ಎಂದು ಆರ್.ಟಿ.ನಗರ ಸಂಚಾರ ಪೊಲೀಸರು ಹೇಳಿದರು.
‘ಕಾರಿನ ಚಾಲಕ ಹಾಗೂ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರು ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆಂದು ಗೊತ್ತಾಗಿದ್ದು, ತನಿಖೆ ಮುಂದುವರಿದಿದೆ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.