ಬೆಂಗಳೂರು: ಕೊಡಿಗೇಹಳ್ಳಿ ಸರ್ವೀಸ್ ರಸ್ತೆಯಲ್ಲಿ ಮೆಟ್ರೊ ಕಾಮಗಾರಿಗಾಗಿ ಅಳವಡಿಸಿರುವ ಬ್ಯಾರಿಕೇಡ್ಗೆ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಚಾಲಕ ಡಿ. ಮಂಜುನಾಥ್ (31) ಮೃತಪಟ್ಟಿದ್ದಾರೆ.
‘ದೇವನಹಳ್ಳಿಯ ಆಹುತಿ ಗ್ರಾಮದ ಮಂಜುನಾಥ್, ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ರಾತ್ರಿ 12.45ರ ಸುಮಾರಿಗೆ ಕಾರಿನಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಹೆಬ್ಬಾಳ ಸಂಚಾರ ಪೊಲೀಸರು ಹೇಳಿದರು.
‘ಬ್ಯಾಟರಾಯನಪುರ–ಕೊಡಿಗೇಹಳ್ಳಿ ಸರ್ವೀಸ್ ರಸ್ತೆಬದಿಯಲ್ಲಿ ಕಾಮಗಾರಿ ನಡೆಯುತ್ತಿದ್ದು, ಈ ಜಾಗದಲ್ಲಿ ಜನ ಓಡಾಡದಂತೆ ಬ್ಯಾರಿಕೇಡ್ಗಳನ್ನು ನಿಲ್ಲಿಸಲಾಗಿದೆ. ಇದೇ ರಸ್ತೆಯಲ್ಲಿ ಹೊರಟಿದ್ದ ಚಾಲಕ, ಕಾರನ್ನು ನಿರ್ಲಕ್ಷ್ಯದಿಂದ ಚಲಾಯಿಸಿದ್ದರು. ಬ್ಯಾರಿಕೇಡ್ಗೆ ಡಿಕ್ಕಿ ಹೊಡೆದಿದ್ದ ಕಾರು, ನಂತರ ಅಂಗಡಿಯೊಂದಕ್ಕೆ ನುಗ್ಗಿತ್ತು. ಕಾರಿನಲ್ಲೇ ಸಿಲುಕಿ ತೀವ್ರ ಗಾಯಗೊಂಡಿದ್ದ ಮಂಜುನಾಥ್, ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.