ADVERTISEMENT

ಬಿಎಂಟಿಸಿ ಬಸ್– ಬೈಕ್ ಅಪಘಾತ; ಕಾನ್‌ಸ್ಟೆಬಲ್ ಸಾವು

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2021, 15:17 IST
Last Updated 4 ಮಾರ್ಚ್ 2021, 15:17 IST
ರಾಮಾಚಾರಿ
ರಾಮಾಚಾರಿ   

ಬೆಂಗಳೂರು: ಬ್ಯಾಡರಹಳ್ಳಿ ಬಳಿ ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಗುರುವಾರ ಮಧ್ಯಾಹ್ನ ಅಪಘಾತ ಸಂಭವಿಸಿದ್ದು, ಕಾನ್‌ಸ್ಟೆಬಲ್ ರಾಮಾಚಾರಿ (47) ಮೃತಪಟ್ಟಿದ್ದಾರೆ.

‘ನಗರದ ಸಿಟಿ ಮಾರ್ಕೆಟ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ರಾಮಾಚಾರಿ ಅವರು ಬೈಕ್‌ನಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ. ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಬೈಕ್‌ಗೆ ಬಸ್‌ ಗುದ್ದಿತ್ತು. ಬಸ್ಸಿನ ಹಿಂದಿನ ಚಕ್ರವು ಬೈಕ್ ಹಾಗೂ ಸವಾರ ರಾಮಾಚಾರಿ ಮೇಲೆಯೇ ಹರಿದು ಹೋಗಿದೆ. ತೀವ್ರ ಗಾಯಗೊಂಡು ರಾಮಾಚಾರಿ ಮೃತಪಟ್ಟಿದ್ದಾರೆ’ ಎಂದೂ ತಿಳಿಸಿದೆ.

ADVERTISEMENT

ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ, ‘ಕರ್ತವ್ಯದ ವೇಳೆಯಲ್ಲೇ ರಾಮಾಚಾರಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬ್ಯಾಡರಹಳ್ಳಿ ಪೊಲೀಸರು ತನಿಖೆ ಆರಂಭಿಸಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.