ADVERTISEMENT

ಪ್ರತ್ಯೇಕ ಅಪಘಾತ: ಶಿಕ್ಷಕಿ ಸೇರಿ ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 7 ಜುಲೈ 2022, 2:23 IST
Last Updated 7 ಜುಲೈ 2022, 2:23 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ನಗರದಲ್ಲಿ ಬುಧವಾರ ನಡೆದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಚಿಕ್ಕಜಾಲ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪಘಾತದಲ್ಲಿ ಖಾಸಗಿ ಶಾಲಾ ಶಿಕ್ಷಕಿ ನಮ್ರತಾ ಶರ್ಮಾ (54) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಟಿಪ್ಪರ್‌ ಚಾಲಕ ಪರಾರಿಯಾಗಿದ್ದಾನೆ. ಸಂಜೆ 4 ಗಂಟೆಯ ವೇಳೆಯಲ್ಲಿ ಕೆಲಸ ಮುಗಿಸಿಕೊಂಡು ಯಲಹಂಕ ಮಾರ್ಗವಾಗಿ ಮನೆಗೆ ತೆರಳುತ್ತಿದ್ದರು. ವಿದ್ಯಾನಗರ ಕಡೆಯಿಂದ ಬಂದ ಟಿಪ್ಪರ್‌, ಬೈಕ್‌ಗೆ ಡಿಕ್ಕಿಯಾಗಿದೆ. ಚಿಕ್ಕಜಾಲ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಕಾಮಾಕ್ಷಿಪಾಳ್ಯದಲ್ಲಿ ನಡೆದ ಅಪಘಾತದಲ್ಲಿ ಪೇಂಟರ್‌ ನಾಗರಾಜ್‌ (54) ಮೃತಪಟ್ಟಿದ್ದಾರೆ. ರಸ್ತೆ ದಾಟುತ್ತಿದ್ದ ವೇಳೆ ಕಾರು ಅವರಿಗೆ ಡಿಕ್ಕಿಯಾಗಿದೆ. ನೈಸ್ ರಸ್ತೆಯಲ್ಲಿ ಬ್ರಹ್ಮದೇವರ ಗುಟ್ಟೆ ಬಳಿ ರಸ್ತೆ ದಾಟುತ್ತಿದ್ದರು. ಮಾಗಡಿ ರಸ್ತೆ ಕಡೆ ಅತಿ ವೇಗವಾಗಿ ಬಂದ ಕಾರು ಡಿಕ್ಕಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.