ADVERTISEMENT

ಅಪಘಾತದಲ್ಲಿ ಕಾರ್ಮಿಕ ಸಾವು

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2019, 19:15 IST
Last Updated 4 ಫೆಬ್ರುವರಿ 2019, 19:15 IST

ಬೆಂಗಳೂರು: ಜಾಲಹಳ್ಳಿಯ ಟಿವಿಎಸ್ ಕ್ರಾಸ್‌ನಲ್ಲಿ ಭಾನುವಾರ ರಾತ್ರಿ 7.45 ಗಂಟೆಯಲ್ಲಿ ರಸ್ತೆ ದಾಟುವ ವೇಳೆಯಲ್ಲಿ ಟೆಂಪೊ ಗುದ್ದಿದ್ದರಿಂದ ಮುಕೇಶ್ (35) ಎಂಬುವರು ಮೃತಪಟ್ಟಿದ್ದಾರೆ.

ಬಿಹಾರದ ಮುಖೇಶ್‌ ಉದ್ಯೋಗ ಅರಸಿ ನಗರಕ್ಕೆ ಬಂದಿದ್ದರು. ಚೊಕ್ಕಸಂದ್ರದಲ್ಲಿ ವಾಸವಿದ್ದು, ಪೀಣ್ಯದ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಮನೆಗೆ ವಾಪಸಾಗುವಾಗ ಅಪಘಾತ ನಡೆದು, ರಸ್ತೆಯಲ್ಲೇ ಬಿದ್ದು ನರಳಾಡುತ್ತಿದ್ದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಚಾಲಕ ಜಗದೀಶ್‌ನನ್ನು ವಶಕ್ಕೆ ಪಡೆದು, ಟೆಂಪೊ ಜಪ್ತಿ ಮಾಡಲಾಗಿದೆ’ ಎಂದು ಪೀಣ್ಯ ಸಂಚಾರ ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.