ಬೆಂಗಳೂರು: ಮಲ್ಲೇಶ್ವರದಲ್ಲಿ ಶನಿವಾರ ತಡರಾತ್ರಿ ಮರಕ್ಕೆ ಕಾರೊಂದು ಗುದ್ದಿದ್ದು, ಚಾಲಕ ರಜತ್ (27) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
‘ವಿಜಯನಗರದ ರಜತ್, ಮನೆಗೆ ಕಾರಿನಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ. ಮೃತದೇಹವನ್ನು ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಅತೀ ವೇಗವಾಗಿ ಹೊರಟಿದ್ದ ಮರಕ್ಕೆ ಗುದ್ದಿತ್ತು. ಮುಂಭಾಗ ಜಖಂಗೊಂಡು ಚಾಲಕ ರಜತ್ ತೀವ್ರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಅವರು ಮೃತಪಟ್ಟರು’ ಎಂದೂ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.