ADVERTISEMENT

ಅಪಘಾತ: ಚಾಲಕ ದುರ್ಮರಣ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2019, 20:01 IST
Last Updated 1 ಏಪ್ರಿಲ್ 2019, 20:01 IST

ಬೆಂಗಳೂರು: ಯಲಹಂಕ ವೃತ್ತದಲ್ಲಿ ನಿಂತಿದ್ದ ಲಾರಿಗೆ ಟ್ರಕ್‌ ಡಿಕ್ಕಿ ಹೊಡೆದಿದ್ದರಿಂದ, ಟ್ರಕ್‌ನ ಚಾಲಕ ಮಂಜುನಾಥ್ (34) ಸ್ಥಳದಲ್ಲೇ ದುರ್ಮರಣಕ್ಕೆ ಈಡಾಗಿದ್ದಾರೆ.

ಗೌರಿಬಿದನೂರು ಬಳಿಯ ದೊಡ್ಡೂರಿನ ನಿವಾಸಿಯಾದ ಮಂಜುನಾಥ್, ಟ್ರಕ್‌ನಲ್ಲಿ ಸಿಮೆಂಟ್ ಸಾಗಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

‘ಲಾರಿ ಚಲಾಯಿಸಿಕೊಂಡು ಯಲಹಂಕ ವೃತ್ತಕ್ಕೆ ಬಂದಿದ್ದ ಅದರ ಚಾಲಕ, ರಸ್ತೆ ಪಕ್ಕದಲ್ಲಿ ಲಾರಿ ನಿಲ್ಲಿಸಿ ಬೇರೆಡೆ ಹೋಗಿದ್ದರು.

ADVERTISEMENT

ಅದೇ ರಸ್ತೆ ಮಾರ್ಗವಾಗಿ ಮಂಜುನಾಥ್, ಟ್ರಕ್‌ ಚಲಾಯಿಸಿಕೊಂಡು ಬರುತ್ತಿದ್ದರು. ಭಾನುವಾರ ರಾತ್ರಿ 11ರ ಸುಮಾರಿಗೆ ಲಾರಿಗೆ, ಟ್ರಕ್‌ ಡಿಕ್ಕಿ ಹೊಡೆದಿತ್ತು’ ಎಂದು ಯಲಹಂಕ ಸಂಚಾರ ಪೊಲೀಸರು ಹೇಳಿದರು.

‘ಡಿಕ್ಕಿಯ ರಭಸಕ್ಕೆ ಟ್ರಕ್ ಸಂಪೂರ್ಣ ನಜ್ಜುಗುಜ್ಜಾಯಿತು.

ಲಾರಿನ ಹಿಂಭಾಗ ಸಹ ಜಖಂಗೊಂಡಿತು. ಟ್ರಕ್‌ ಒಳಗೆಯೇ ಸಿಲುಕಿ ತೀವ್ರವಾಗಿ ಗಾಯಗೊಂಡ ಮಂಜುನಾಥ್, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಪ್ರತ್ಯಕ್ಷದರ್ಶಿಯೊಬ್ಬರ ಹೇಳಿಕೆ ಪಡೆಯಲಾಗಿದೆ’ ಎಂದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.