ADVERTISEMENT

ಕಳ್ಳತನ: 9 ತಿಂಗಳ ಬಳಿಕ ಸಿಕ್ಕ ಆರೋಪಿ, ₹8 ಲಕ್ಷ ಮೌಲ್ಯದ ಚಿನ್ನಾಭರಣ, ಬೈಕ್ ಜಪ್ತಿ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2022, 4:06 IST
Last Updated 25 ಸೆಪ್ಟೆಂಬರ್ 2022, 4:06 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿ ವೆಂಕಟೇಶ್ ಅಲಿಯಾಸ್ ವೆಂಕಿ (20) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

‘ಚಕ್ರನಗರದ ಎರಡನೇ ಅಡ್ಡರಸ್ತೆ ನಿವಾಸಿ ವೆಂಕಟೇಶ್ ಜನವರಿ 5ರಂದು ರಾತ್ರಿ ಕೃತ್ಯ ಎಸಗಿ ಪರಾರಿಯಾಗಿದ್ದ. 9 ತಿಂಗಳು ತನಿಖೆ ನಡೆಸಿದ್ದ ಪೊಲೀಸರು, ಇತ್ತೀಚೆಗೆ ಸಿಕ್ಕ ಸುಳಿವು ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ. ₹8 ಲಕ್ಷ ಮೌಲ್ಯದ 160 ಗ್ರಾಂ ಚಿನ್ನಾಭರಣ, 750 ಗ್ರಾಂ ಬೆಳ್ಳಿ ಸಾಮಗ್ರಿ ಹಾಗೂ ರಾಯಲ್ ಎನ್‌ಫೀಲ್ಡ್ ಬೈಕ್ ಜಪ್ತಿ ಮಾಡಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಪೀಣ್ಯ ಹಾಗೂ ಚಿತ್ರದುರ್ಗ ಠಾಣೆ ವ್ಯಾಪ್ತಿಯಲ್ಲೂ ಮನೆಗಳಲ್ಲಿ ಆರೋಪಿ ಕಳ್ಳತನ ಮಾಡಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.