ADVERTISEMENT

ಆರೋಪಿ ಬಂಧಿಸಲು ಬಂದಿದ್ದ ಪಿಎಸ್‌ಐಗೆ ಚಾಕು ಇರಿತ, ಪರಾರಿ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2021, 2:55 IST
Last Updated 31 ಡಿಸೆಂಬರ್ 2021, 2:55 IST

ಬೆಂಗಳೂರು: ಆರೋಪಿಯೊಬ್ಬ ತನ್ನನ್ನು ಬಂಧಿಸಲು ಬಂದಿದ್ದ ಪೊಲೀಸ್‌ ಸಿಬ್ಬಂದಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಈ ಸಂಬಂಧ ಸಂಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಯಶವಂತಪುರ ಪೊಲೀಸ್‌ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ವಿನೋದ್‌ ರಾಥೋಡ್‌ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಕಳ್ಳತನ ಪ್ರಕರಣವೊಂದರಲ್ಲಿ ಪೊಲೀಸರಿಗೆ ಬೇಕಿದ್ದ ಆರೋಪಿಯು ನಮ್ಮ ಠಾಣೆ ವ್ಯಾಪ್ತಿಯ ಭೂಪಸಂದ್ರ–ಹೆಬ್ಬಾಳ ರಸ್ತೆಯಲ್ಲಿರುವ ತೋಟದ ಮನೆಯ ಬಳಿ ಇರುವ ಕುರಿತು ವಿನೋದ್‌ ಅವರಿಗೆ ಮಾಹಿತಿ ಲಭಿಸಿತ್ತು. ಹೀಗಾಗಿ ಸಿಬ್ಬಂದಿಯೊಂದಿಗೆ ರಾತ್ರಿ 11 ಗಂಟೆ ಸುಮಾರಿಗೆ ಸ್ಥಳಕ್ಕೆ ಹೋಗಿದ್ದರು. ಈ ವೇಳೆ ಪರಾರಿಯಾಗಲು ಯತ್ನಿಸಿದ ಆರೋಪಿ, ಅವರ ಭುಜಕ್ಕೆ ಚುಚ್ಚಿ ಅಲ್ಲಿಂದ ಪಾರಾರಿಯಾದ’ ಎಂದು ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.