ADVERTISEMENT

‘ಡಿಸೈನ್ ಕಾಲೇಜು ತೆರೆಯಲು ಕ್ರಮ’

​ಪ್ರಜಾವಾಣಿ ವಾರ್ತೆ
Published 4 ಜನವರಿ 2020, 19:46 IST
Last Updated 4 ಜನವರಿ 2020, 19:46 IST
ಕಲಾವಿದರಾದ ಗಣೇಶ ಸೋಮಯಾಜಿ (ಡಿ.ದೇವರಾಜ್ ಅರಸ್ ಪ್ರಶಸ್ತಿ), ಎಚ್.ಎಂ.ಸುರೇಶ್ (ಎಚ್.ಕೆ. ಕೇಜ್ರಿವಾಲ್ ಪ್ರಶಸ್ತಿ), ಆರ್.ಬಿ.ಭಾಸ್ಕರನ್ (ಪ್ರೊ.ಎಂ.ಎಸ್. ನಂಜುಂಡರಾವ್ ಪ್ರಶಸ್ತಿ), ಎಂ.ಕೃಷ್ಣಪ್ಪ (ಎಂ. ಆರ್ಯಮೂರ್ತಿ ಪ್ರಶಸ್ತಿ) ಮತ್ತು ವಿಜಯ ಹಾಗರಗುಂಡಗಿ ಅವರಿಗೆ ವೈ.ಸುಬ್ರಹ್ಮಣ್ಯರಾಜು ಪ್ರಶಸ್ತಿ ಪ್ರದಾನ ಮಾಡಲಾಯಿತು. (ನಿಂತವರು ಎಡದಿಂದ) ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಬಿ.ಎಲ್. ಶಂಕರ್, ಕಲಾವಿದ ಪ್ರಭಾಕರ್ ಕೊಲ್ಟೆ, ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥ‌ನಾರಾಯಣ ಮತ್ತು ಚಿತ್ರಕಲಾ ಮಹಾವಿದ್ಯಾಲಯ ಪ್ರಾಂಶುಪಾಲ ಪ್ರೊ. ರಾಜೇಂದ್ರಸಿಂಗ್ ಬಾವ್ನಿ ಇದ್ದರು -–ಪ್ರಜಾವಾಣಿ ಚಿತ್ರ
ಕಲಾವಿದರಾದ ಗಣೇಶ ಸೋಮಯಾಜಿ (ಡಿ.ದೇವರಾಜ್ ಅರಸ್ ಪ್ರಶಸ್ತಿ), ಎಚ್.ಎಂ.ಸುರೇಶ್ (ಎಚ್.ಕೆ. ಕೇಜ್ರಿವಾಲ್ ಪ್ರಶಸ್ತಿ), ಆರ್.ಬಿ.ಭಾಸ್ಕರನ್ (ಪ್ರೊ.ಎಂ.ಎಸ್. ನಂಜುಂಡರಾವ್ ಪ್ರಶಸ್ತಿ), ಎಂ.ಕೃಷ್ಣಪ್ಪ (ಎಂ. ಆರ್ಯಮೂರ್ತಿ ಪ್ರಶಸ್ತಿ) ಮತ್ತು ವಿಜಯ ಹಾಗರಗುಂಡಗಿ ಅವರಿಗೆ ವೈ.ಸುಬ್ರಹ್ಮಣ್ಯರಾಜು ಪ್ರಶಸ್ತಿ ಪ್ರದಾನ ಮಾಡಲಾಯಿತು. (ನಿಂತವರು ಎಡದಿಂದ) ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಬಿ.ಎಲ್. ಶಂಕರ್, ಕಲಾವಿದ ಪ್ರಭಾಕರ್ ಕೊಲ್ಟೆ, ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥ‌ನಾರಾಯಣ ಮತ್ತು ಚಿತ್ರಕಲಾ ಮಹಾವಿದ್ಯಾಲಯ ಪ್ರಾಂಶುಪಾಲ ಪ್ರೊ. ರಾಜೇಂದ್ರಸಿಂಗ್ ಬಾವ್ನಿ ಇದ್ದರು -–ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ನಗರದಲ್ಲಿ ಡಿಸೈನ್(ವಿನ್ಯಾಸ) ಕಾಲೇಜು ತೆರೆಯಲು ಕ್ರಮ ಕೈಗೊಳ್ಳಲಾಗುವುದು’ ಎಂದು ‌ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

‌ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಿತ್ರಕಲಾ ಸಮ್ಮಾನ್ ಮತ್ತು ಪ್ರೊ. ಎಂ.ಎಸ್. ನಂಜುಂಡರಾವ್ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ‘ನಗರದಲ್ಲಿ ಈವರೆಗೂ ಡಿಸೈನ್ ಕಾಲೇಜು ಸ್ಥಾಪಿಸಿಲ್ಲ ಎಂಬುದೇ ಆಶ್ಚರ್ಯ. ಎಷ್ಟೋ ವರ್ಷಗಳ ಹಿಂದೆ
ಯೇ ಆಗಬೇಕಿದ್ದ ಕೆಲಸ ಇದು. ಈ ಬಗ್ಗೆ ರೂಪುರೇಷೆ ಸಿದ್ಧಪಡಿಸುವ ಸಂಬಂಧ ಚರ್ಚೆ ನಡೆಸಿದ್ದೇನೆ’ ಎಂದು ಹೇಳಿದರು.

‘ಸದ್ಯ ನೀಡುತ್ತಿರುವ ಶಿಕ್ಷಣವು ವಿದ್ಯಾರ್ಥಿಗಳ ಬದುಕು ರೂಪಿಸಿಕೊಳ್ಳಲು ಪೂರಕವಾಗಿಲ್ಲ. ಕಲಿಕಾ ವಿಧಾನವನ್ನು ಬದಲಿಸುವ ಕೆಲಸ ಆಗಬೇಕಿದೆ’ ಎಂದರು.

ADVERTISEMENT

‘ಚಿತ್ರಕಲಾ ಪರಿಷತ್ತು ಪ್ರತಿವರ್ಷ ಆಯೋಜಿಸುವ ಚಿತ್ರಸಂತೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬೇರೆ ದೇಶಗಳಲ್ಲಿ ನಡೆಯುವ ಚಿತ್ರಸಂತೆಗೆ ಅಲ್ಲಿನ ಜನಸಂಖ್ಯೆಗಿಂತ ಐದು ಪಟ್ಟು ಹೆಚ್ಚಿನ ಕಲಾಸಕ್ತರು ಭಾಗವಹಿಸುತ್ತಾರೆ. ಆ ರೀತಿಯ ವಾತಾವರಣ ಇಲ್ಲಿಯೂ ಸೃಷ್ಟಿಯಾಗಬೇಕಿದೆ’ ಎಂದು ಅವರು ಅಭಿಪ್ರಾಯಪಟ್ಟರು. ರುಮಾಲೆ ಚೆನ್ನಬಸವಯ್ಯರ ನೆನಪಿನಲ್ಲಿ ಆಯೋಜಿಸಿದ್ದ ‘ಬೆಂಗಳೂರು ಲ್ಯಾಂಡ್‍ಸ್ಕೇಪ್’ ಚಿತ್ರ ಪ್ರದರ್ಶನವನ್ನು ಖ್ಯಾತ ಕಲಾವಿದ ಪ್ರೊ.ಪ್ರಭಾಕರ್ ಕೊಲ್ಟೆ ಉದ್ಘಾಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.