ADVERTISEMENT

ರಾಜ್ಯದ ಮತ್ತೊಬ್ಬ ಐಪಿಎಸ್ ಅಧಿಕಾರಿ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2022, 19:23 IST
Last Updated 1 ಏಪ್ರಿಲ್ 2022, 19:23 IST
ಭಾಸ್ಕರ್ ರಾವ್
ಭಾಸ್ಕರ್ ರಾವ್   

ಬೆಂಗಳೂರು: ರಾಜ್ಯದ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ರಾಜೀನಾಮೆ ನೀಡಿ ಸೇವೆ ತ್ಯಜಿಸಿದ್ದ ಬೆನ್ನಲ್ಲೇ, ರೈಲ್ವೆ ಪೊಲೀಸ್ ಎಡಿಜಿಪಿ ಬಿ. ಭಾಸ್ಕರ್ ರಾವ್ ಸಹ ತಮ್ಮ ಹುದ್ದೆ ರಾಜೀನಾಮೆ ನೀಡಿದ್ದಾರೆ.

ಭಾಸ್ಕರ್ ರಾವ್ ತಮ್ಮ ಹುದ್ದೆಗೆ ನೀಡಿದ್ದ ರಾಜೀನಾಮೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ. ಶನಿವಾರ ಕರ್ತವ್ಯಕ್ಕೆ ಹಾಜರಾಗಲಿರುವ ಭಾಸ್ಕರ್ ರಾವ್, ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಸೇವೆಯಿಂದ ನಿರ್ಗಮಿಸಲಿದ್ದಾರೆ.

‘ವೈಯಕ್ತಿಕ ಕಾರಣದಿಂದ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ಮನವಿಯನ್ನು ಅಂಗೀಕರಿಸಿ’ ಎಂದು ಭಾಸ್ಕರ್ ರಾವ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರಿಗೆ 2021ರ ಸೆಪ್ಟೆಂಬರ್‌ನಲ್ಲಿ ಪತ್ರ ನೀಡಿದ್ದರು. ಪತ್ರ ಪರಿಶೀಲಿಸಿರುವ ಮುಖ್ಯ ಕಾರ್ಯದರ್ಶಿ, ರಾಜೀನಾಮೆ ಅಂಗೀಕರಿಸಿ ಆದೇಶ ಪತ್ರವನ್ನು ಭಾಸ್ಕರ ರಾವ್ ಅವರಿಗೆ ಕಳುಹಿಸಿದ್ದಾರೆ.

ADVERTISEMENT

ರಾಜೀನಾಮೆ ಬಗ್ಗೆ ‘ಪ್ರಜಾವಾಣಿ’ ಜೊತೆ ಮಾತನಾಡಿದ ಭಾಸ್ಕರ್ ರಾವ್, ‘ರಾಜೀನಾಮೆ ಅಂಗೀಕಾರ ಆಗಿದೆ. ಶನಿವಾರ ಪರೇಡ್‌ಗೆ ಹಾಜರಾಗುತ್ತೇನೆ. ನಂತರವೇ ಪೊಲೀಸ್ ಸೇವೆಯಿಂದ ಹೊರ ಬರುತ್ತೇನೆ. ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಕೆಲದಿನ ಬಿಟ್ಟು ತಿಳಿಸುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.