ADVERTISEMENT

ಏರೊ ಇಂಡಿಯಾ: ಉನ್ನತ ಮಟ್ಟದ ಸಭೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2019, 18:47 IST
Last Updated 24 ಫೆಬ್ರುವರಿ 2019, 18:47 IST

ಬೆಂಗಳೂರು: ಏರೊ ಇಂಡಿಯಾ ವೈಮಾನಿಕ ಪ್ರದರ್ಶನದ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಭಾನುವಾರ ಉನ್ನತ ಮಟ್ಟದ ಸಭೆ ನಡೆಯಿತು.

ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಗೃಹ ಸಚಿವ ಎಂ. ಬಿ. ಪಾಟೀಲ ಪ್ರದರ್ಶನ ಕುರಿತು ಪರಾಮರ್ಶೆ ನಡೆಸಿದರು.

ಬೆಂಗಳೂರಿನಿಂದ ಈ ಕಾರ್ಯಕ್ರಮ ಸ್ಥಳಾಂತರವಾಗುವ ಕುರಿತು ವದಂತಿಗಳು ಹಬ್ಬಿದ್ದರೂ ಇಲ್ಲಿಯೇ ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ರಕ್ಷಣಾ ಸಚಿವರಿಗೆ ಮುಖ್ಯಮಂತ್ರಿ ಕೃತಜ್ಞತೆ ಸಲ್ಲಿಸಿದರು. ಮುಂದಿನ ದಿನಗಳಲ್ಲಿಯೂ ಈ ಪ್ರದರ್ಶನವನ್ನು ಬೆಂಗಳೂರಿನಲ್ಲಿಯೇ ಆಯೋಜಿಸುವಂತೆ ಮನವಿ ಮಾಡಿದರು.

ADVERTISEMENT

ಪಾರ್ಕಿಂಗ್ ಸ್ಥಳದಲ್ಲಿ ಸಂಭವಿಸಿದ ಬೆಂಕಿ ಅವಘಡ ಮತ್ತು ಘಟನೆಯ ನಂತರ ಕೈಗೊಂಡ ರಕ್ಷಣಾ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಮುಂದಿನ ದಿನಗಳಲ್ಲಿ ಇಂಥ ಕಾರ್ಯಕ್ರಮ ಆಯೋಜಿಸುವಾಗ ಮುನ್ನೆಚ್ಚರಿಕೆ ವಹಿಸಲು ಮತ್ತು ಕೇಂದ್ರ– ರಾಜ್ಯ ಸರ್ಕಾರದ ಇಲಾಖೆಗಳು ಮತ್ತು ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ತೀರ್ಮಾನಿಸಲಾಯಿತು.

ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.